ಕೊಡಗು

ಕೊಳಕು ಮಂಡಲ ಹಾವಿಗೆ ಆರೈಕೆ; 27 ಮರಿ ಜನನ

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ ಗ್ರಾಮದ ನಿವಾಸಿ ಉರಗ ಪ್ರೇಮಿ ಸ್ನೇಕ್ ಸುರೇಶ್ ಕೊಳಕು ಮಂಡಲ ಹಾವಿಗೆ ಆರೈಕೆ ಮಾಡಿ ಮರಿ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ದು ಬಿಡುವ ಸುರೇಶ್‌ಗೆ ಇತ್ತೀಚೆಗೆ ಅಂಚೆಮನೆ ಆದರ್ಶ್ ಎಂಬವರ ಮನೆಯಲ್ಲಿ ಹಾವು ಇರುವುದಾಗಿ ಮಾಹಿತಿ ಬಂದಿತ್ತು.
ತಕ್ಷಣ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದ ಸಂದರ್ಭದಲ್ಲಿ ಹೊಟ್ಟೆ ದಪ್ಪ ಇರುವುದನ್ನು ಕಂಡು ಇತರ ಉರಗ ತಜ್ಞರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ಆಹಾರ ಸೇವಿಸಿದ್ದರಿಂದ ದಪ್ಪ ಇರುವುದಾಗಿ ತಿಳಿಸಿದರು. ಆದರೆ ಈ ಬಗ್ಗೆ ಸಂಶಯಗೊಂಡ ಉರಗ ರಕ್ಷಕ ಸುರೇಶ್, ಅಂತರ್ಜಾಲದಲ್ಲಿ ಕೊಳಕು ಮಂಡಲ ಹಾವಿನ ಬಗ್ಗೆ ಮಾಹಿತಿ ಕಲೆಹಾಕಿದಾಗ ಕೊಳಕು ಮಂಡಲ ಮೊಟ್ಟೆಯಿಡದೆ ಮರಿ ಹಾಕುವ ಬಗ್ಗೆ ತಿಳಿದಿದೆ.

ಈ ಹಿಂದೆ ಹಾವಿನ ಮೊಟ್ಟೆಗೆ ಕೃತಕ ಶಾಖ ನೀಡಿ ಮರಿ ಮಾಡಿದ ಉರಗ ರಕ್ಷಕ, ಇದು ಗರ್ಭಿಣಿ ಇರಬಹುದು ಎಂದು ಸಂದೇಹಗೊಂಡರು. ಅಲ್ಲದೆ ತಡರಾತ್ರಿ ಆಗಿದ್ದರಿಂದ ಮರುದಿನ ಅರಣ್ಯಕ್ಕೆ ಬಿಡಲು ನಿರ್ಧರಿಸಿದರು. ಮನೆಯಲ್ಲಿ ಆರೈಕೆ ಮಾಡಿದ ಸುರೇಶ್ ಮರುದಿನ ಪರಿಶೀಲಿಸಿದಾಗ ಹಾವು ಸುಮಾರು 27 ಮರಿಗಳಿಗೆ ಜನ್ಮ ನೀಡಿದೆ.
ಮರಿ ಹಾಗೂ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಮಾಲ್ದಾರೆ ಅರಣ್ಯ ವ್ಯಾಪ್ತಿಯ ಗೆದ್ದಿಗೆ ಬೆಟ್ಟದಲ್ಲಿ ಆರ್.ಐ.ಟಿ. ಅಧಿಕಾರಿಗಳಾದ ಮಣಿಕಂಠ ಮತ್ತು ಸಶಿ ಅವರ ನೇತೃತ್ವದಲ್ಲಿ ಹಾವು ಮತ್ತು ಮರಿಗಳನ್ನು ಸುರಕ್ಷಿತವಾಗಿ ಬಿಡಲಾಯಿತು.

ಹಾವನ್ನು ಕಂಡೊಡನೆ ಸಾಯಿಸುವ ಜನರ ಮಧ್ಯೆ ವಿಷಪೂರಿತ ಹಾವನ್ನು ಯಾವುದೇ ನೋವು ಮಾಡದೆ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಸುರೇಶ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಅದರಲ್ಲೂ ಆರೈಕೆ ಮಾಡಿ ಮರಿ ಮಾಡಿರುವ ಈ ಅಪರೂಪದ ಘಟನೆ ಸಾಮಾಜಿಕ ಜೀವನದಲ್ಲಿ ಬದುಕು ಹಕ್ಕು ಸರ್ವ ಜೀವ ಜಂತುಗಳಿಗೂ ಇದೆ ಎಂಬುವುದನ್ನು ಸಾಬಿತು ಪಡಿಸಿದೆ.
-ಅಭಿತ, ಗ್ರಾ.ಪಂ. ಸದಸ್ಯೆ ಸಿದ್ದಾಪುರ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

4 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

4 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

5 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

5 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

6 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 hours ago