ಕೊಡಗು

ಕೊಳಕು ಮಂಡಲ ಹಾವಿಗೆ ಆರೈಕೆ; 27 ಮರಿ ಜನನ

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ ಗ್ರಾಮದ ನಿವಾಸಿ ಉರಗ ಪ್ರೇಮಿ ಸ್ನೇಕ್ ಸುರೇಶ್ ಕೊಳಕು ಮಂಡಲ ಹಾವಿಗೆ ಆರೈಕೆ ಮಾಡಿ ಮರಿ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ದು ಬಿಡುವ ಸುರೇಶ್‌ಗೆ ಇತ್ತೀಚೆಗೆ ಅಂಚೆಮನೆ ಆದರ್ಶ್ ಎಂಬವರ ಮನೆಯಲ್ಲಿ ಹಾವು ಇರುವುದಾಗಿ ಮಾಹಿತಿ ಬಂದಿತ್ತು.
ತಕ್ಷಣ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದ ಸಂದರ್ಭದಲ್ಲಿ ಹೊಟ್ಟೆ ದಪ್ಪ ಇರುವುದನ್ನು ಕಂಡು ಇತರ ಉರಗ ತಜ್ಞರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ಆಹಾರ ಸೇವಿಸಿದ್ದರಿಂದ ದಪ್ಪ ಇರುವುದಾಗಿ ತಿಳಿಸಿದರು. ಆದರೆ ಈ ಬಗ್ಗೆ ಸಂಶಯಗೊಂಡ ಉರಗ ರಕ್ಷಕ ಸುರೇಶ್, ಅಂತರ್ಜಾಲದಲ್ಲಿ ಕೊಳಕು ಮಂಡಲ ಹಾವಿನ ಬಗ್ಗೆ ಮಾಹಿತಿ ಕಲೆಹಾಕಿದಾಗ ಕೊಳಕು ಮಂಡಲ ಮೊಟ್ಟೆಯಿಡದೆ ಮರಿ ಹಾಕುವ ಬಗ್ಗೆ ತಿಳಿದಿದೆ.

ಈ ಹಿಂದೆ ಹಾವಿನ ಮೊಟ್ಟೆಗೆ ಕೃತಕ ಶಾಖ ನೀಡಿ ಮರಿ ಮಾಡಿದ ಉರಗ ರಕ್ಷಕ, ಇದು ಗರ್ಭಿಣಿ ಇರಬಹುದು ಎಂದು ಸಂದೇಹಗೊಂಡರು. ಅಲ್ಲದೆ ತಡರಾತ್ರಿ ಆಗಿದ್ದರಿಂದ ಮರುದಿನ ಅರಣ್ಯಕ್ಕೆ ಬಿಡಲು ನಿರ್ಧರಿಸಿದರು. ಮನೆಯಲ್ಲಿ ಆರೈಕೆ ಮಾಡಿದ ಸುರೇಶ್ ಮರುದಿನ ಪರಿಶೀಲಿಸಿದಾಗ ಹಾವು ಸುಮಾರು 27 ಮರಿಗಳಿಗೆ ಜನ್ಮ ನೀಡಿದೆ.
ಮರಿ ಹಾಗೂ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಮಾಲ್ದಾರೆ ಅರಣ್ಯ ವ್ಯಾಪ್ತಿಯ ಗೆದ್ದಿಗೆ ಬೆಟ್ಟದಲ್ಲಿ ಆರ್.ಐ.ಟಿ. ಅಧಿಕಾರಿಗಳಾದ ಮಣಿಕಂಠ ಮತ್ತು ಸಶಿ ಅವರ ನೇತೃತ್ವದಲ್ಲಿ ಹಾವು ಮತ್ತು ಮರಿಗಳನ್ನು ಸುರಕ್ಷಿತವಾಗಿ ಬಿಡಲಾಯಿತು.

ಹಾವನ್ನು ಕಂಡೊಡನೆ ಸಾಯಿಸುವ ಜನರ ಮಧ್ಯೆ ವಿಷಪೂರಿತ ಹಾವನ್ನು ಯಾವುದೇ ನೋವು ಮಾಡದೆ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಸುರೇಶ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಅದರಲ್ಲೂ ಆರೈಕೆ ಮಾಡಿ ಮರಿ ಮಾಡಿರುವ ಈ ಅಪರೂಪದ ಘಟನೆ ಸಾಮಾಜಿಕ ಜೀವನದಲ್ಲಿ ಬದುಕು ಹಕ್ಕು ಸರ್ವ ಜೀವ ಜಂತುಗಳಿಗೂ ಇದೆ ಎಂಬುವುದನ್ನು ಸಾಬಿತು ಪಡಿಸಿದೆ.
-ಅಭಿತ, ಗ್ರಾ.ಪಂ. ಸದಸ್ಯೆ ಸಿದ್ದಾಪುರ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

2 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago