ಕೊಡಗು

ಕೊಳಕು ಮಂಡಲ ಹಾವಿಗೆ ಆರೈಕೆ; 27 ಮರಿ ಜನನ

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ ಗ್ರಾಮದ ನಿವಾಸಿ ಉರಗ ಪ್ರೇಮಿ ಸ್ನೇಕ್ ಸುರೇಶ್ ಕೊಳಕು ಮಂಡಲ ಹಾವಿಗೆ ಆರೈಕೆ ಮಾಡಿ ಮರಿ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ದು ಬಿಡುವ ಸುರೇಶ್‌ಗೆ ಇತ್ತೀಚೆಗೆ ಅಂಚೆಮನೆ ಆದರ್ಶ್ ಎಂಬವರ ಮನೆಯಲ್ಲಿ ಹಾವು ಇರುವುದಾಗಿ ಮಾಹಿತಿ ಬಂದಿತ್ತು.
ತಕ್ಷಣ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದ ಸಂದರ್ಭದಲ್ಲಿ ಹೊಟ್ಟೆ ದಪ್ಪ ಇರುವುದನ್ನು ಕಂಡು ಇತರ ಉರಗ ತಜ್ಞರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ಆಹಾರ ಸೇವಿಸಿದ್ದರಿಂದ ದಪ್ಪ ಇರುವುದಾಗಿ ತಿಳಿಸಿದರು. ಆದರೆ ಈ ಬಗ್ಗೆ ಸಂಶಯಗೊಂಡ ಉರಗ ರಕ್ಷಕ ಸುರೇಶ್, ಅಂತರ್ಜಾಲದಲ್ಲಿ ಕೊಳಕು ಮಂಡಲ ಹಾವಿನ ಬಗ್ಗೆ ಮಾಹಿತಿ ಕಲೆಹಾಕಿದಾಗ ಕೊಳಕು ಮಂಡಲ ಮೊಟ್ಟೆಯಿಡದೆ ಮರಿ ಹಾಕುವ ಬಗ್ಗೆ ತಿಳಿದಿದೆ.

ಈ ಹಿಂದೆ ಹಾವಿನ ಮೊಟ್ಟೆಗೆ ಕೃತಕ ಶಾಖ ನೀಡಿ ಮರಿ ಮಾಡಿದ ಉರಗ ರಕ್ಷಕ, ಇದು ಗರ್ಭಿಣಿ ಇರಬಹುದು ಎಂದು ಸಂದೇಹಗೊಂಡರು. ಅಲ್ಲದೆ ತಡರಾತ್ರಿ ಆಗಿದ್ದರಿಂದ ಮರುದಿನ ಅರಣ್ಯಕ್ಕೆ ಬಿಡಲು ನಿರ್ಧರಿಸಿದರು. ಮನೆಯಲ್ಲಿ ಆರೈಕೆ ಮಾಡಿದ ಸುರೇಶ್ ಮರುದಿನ ಪರಿಶೀಲಿಸಿದಾಗ ಹಾವು ಸುಮಾರು 27 ಮರಿಗಳಿಗೆ ಜನ್ಮ ನೀಡಿದೆ.
ಮರಿ ಹಾಗೂ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಮಾಲ್ದಾರೆ ಅರಣ್ಯ ವ್ಯಾಪ್ತಿಯ ಗೆದ್ದಿಗೆ ಬೆಟ್ಟದಲ್ಲಿ ಆರ್.ಐ.ಟಿ. ಅಧಿಕಾರಿಗಳಾದ ಮಣಿಕಂಠ ಮತ್ತು ಸಶಿ ಅವರ ನೇತೃತ್ವದಲ್ಲಿ ಹಾವು ಮತ್ತು ಮರಿಗಳನ್ನು ಸುರಕ್ಷಿತವಾಗಿ ಬಿಡಲಾಯಿತು.

ಹಾವನ್ನು ಕಂಡೊಡನೆ ಸಾಯಿಸುವ ಜನರ ಮಧ್ಯೆ ವಿಷಪೂರಿತ ಹಾವನ್ನು ಯಾವುದೇ ನೋವು ಮಾಡದೆ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಸುರೇಶ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಅದರಲ್ಲೂ ಆರೈಕೆ ಮಾಡಿ ಮರಿ ಮಾಡಿರುವ ಈ ಅಪರೂಪದ ಘಟನೆ ಸಾಮಾಜಿಕ ಜೀವನದಲ್ಲಿ ಬದುಕು ಹಕ್ಕು ಸರ್ವ ಜೀವ ಜಂತುಗಳಿಗೂ ಇದೆ ಎಂಬುವುದನ್ನು ಸಾಬಿತು ಪಡಿಸಿದೆ.
-ಅಭಿತ, ಗ್ರಾ.ಪಂ. ಸದಸ್ಯೆ ಸಿದ್ದಾಪುರ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

2 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

2 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

2 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

2 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

2 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

2 hours ago