ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ.
ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ ಗ್ರಾಮದ ನಿವಾಸಿ ಉರಗ ಪ್ರೇಮಿ ಸ್ನೇಕ್ ಸುರೇಶ್ ಕೊಳಕು ಮಂಡಲ ಹಾವಿಗೆ ಆರೈಕೆ ಮಾಡಿ ಮರಿ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ದು ಬಿಡುವ ಸುರೇಶ್ಗೆ ಇತ್ತೀಚೆಗೆ ಅಂಚೆಮನೆ ಆದರ್ಶ್ ಎಂಬವರ ಮನೆಯಲ್ಲಿ ಹಾವು ಇರುವುದಾಗಿ ಮಾಹಿತಿ ಬಂದಿತ್ತು.
ತಕ್ಷಣ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದ ಸಂದರ್ಭದಲ್ಲಿ ಹೊಟ್ಟೆ ದಪ್ಪ ಇರುವುದನ್ನು ಕಂಡು ಇತರ ಉರಗ ತಜ್ಞರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ಆಹಾರ ಸೇವಿಸಿದ್ದರಿಂದ ದಪ್ಪ ಇರುವುದಾಗಿ ತಿಳಿಸಿದರು. ಆದರೆ ಈ ಬಗ್ಗೆ ಸಂಶಯಗೊಂಡ ಉರಗ ರಕ್ಷಕ ಸುರೇಶ್, ಅಂತರ್ಜಾಲದಲ್ಲಿ ಕೊಳಕು ಮಂಡಲ ಹಾವಿನ ಬಗ್ಗೆ ಮಾಹಿತಿ ಕಲೆಹಾಕಿದಾಗ ಕೊಳಕು ಮಂಡಲ ಮೊಟ್ಟೆಯಿಡದೆ ಮರಿ ಹಾಕುವ ಬಗ್ಗೆ ತಿಳಿದಿದೆ.
ಈ ಹಿಂದೆ ಹಾವಿನ ಮೊಟ್ಟೆಗೆ ಕೃತಕ ಶಾಖ ನೀಡಿ ಮರಿ ಮಾಡಿದ ಉರಗ ರಕ್ಷಕ, ಇದು ಗರ್ಭಿಣಿ ಇರಬಹುದು ಎಂದು ಸಂದೇಹಗೊಂಡರು. ಅಲ್ಲದೆ ತಡರಾತ್ರಿ ಆಗಿದ್ದರಿಂದ ಮರುದಿನ ಅರಣ್ಯಕ್ಕೆ ಬಿಡಲು ನಿರ್ಧರಿಸಿದರು. ಮನೆಯಲ್ಲಿ ಆರೈಕೆ ಮಾಡಿದ ಸುರೇಶ್ ಮರುದಿನ ಪರಿಶೀಲಿಸಿದಾಗ ಹಾವು ಸುಮಾರು 27 ಮರಿಗಳಿಗೆ ಜನ್ಮ ನೀಡಿದೆ.
ಮರಿ ಹಾಗೂ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಮಾಲ್ದಾರೆ ಅರಣ್ಯ ವ್ಯಾಪ್ತಿಯ ಗೆದ್ದಿಗೆ ಬೆಟ್ಟದಲ್ಲಿ ಆರ್.ಐ.ಟಿ. ಅಧಿಕಾರಿಗಳಾದ ಮಣಿಕಂಠ ಮತ್ತು ಸಶಿ ಅವರ ನೇತೃತ್ವದಲ್ಲಿ ಹಾವು ಮತ್ತು ಮರಿಗಳನ್ನು ಸುರಕ್ಷಿತವಾಗಿ ಬಿಡಲಾಯಿತು.
ಹಾವನ್ನು ಕಂಡೊಡನೆ ಸಾಯಿಸುವ ಜನರ ಮಧ್ಯೆ ವಿಷಪೂರಿತ ಹಾವನ್ನು ಯಾವುದೇ ನೋವು ಮಾಡದೆ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಸುರೇಶ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಅದರಲ್ಲೂ ಆರೈಕೆ ಮಾಡಿ ಮರಿ ಮಾಡಿರುವ ಈ ಅಪರೂಪದ ಘಟನೆ ಸಾಮಾಜಿಕ ಜೀವನದಲ್ಲಿ ಬದುಕು ಹಕ್ಕು ಸರ್ವ ಜೀವ ಜಂತುಗಳಿಗೂ ಇದೆ ಎಂಬುವುದನ್ನು ಸಾಬಿತು ಪಡಿಸಿದೆ.
-ಅಭಿತ, ಗ್ರಾ.ಪಂ. ಸದಸ್ಯೆ ಸಿದ್ದಾಪುರ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…