ಕೊಡಗು

ಕೊಳಕು ಮಂಡಲ ಹಾವಿಗೆ ಆರೈಕೆ; 27 ಮರಿ ಜನನ

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ ಗ್ರಾಮದ ನಿವಾಸಿ ಉರಗ ಪ್ರೇಮಿ ಸ್ನೇಕ್ ಸುರೇಶ್ ಕೊಳಕು ಮಂಡಲ ಹಾವಿಗೆ ಆರೈಕೆ ಮಾಡಿ ಮರಿ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಕೊಂಡೊಯ್ದು ಬಿಡುವ ಸುರೇಶ್‌ಗೆ ಇತ್ತೀಚೆಗೆ ಅಂಚೆಮನೆ ಆದರ್ಶ್ ಎಂಬವರ ಮನೆಯಲ್ಲಿ ಹಾವು ಇರುವುದಾಗಿ ಮಾಹಿತಿ ಬಂದಿತ್ತು.
ತಕ್ಷಣ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದ ಸಂದರ್ಭದಲ್ಲಿ ಹೊಟ್ಟೆ ದಪ್ಪ ಇರುವುದನ್ನು ಕಂಡು ಇತರ ಉರಗ ತಜ್ಞರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ಆಹಾರ ಸೇವಿಸಿದ್ದರಿಂದ ದಪ್ಪ ಇರುವುದಾಗಿ ತಿಳಿಸಿದರು. ಆದರೆ ಈ ಬಗ್ಗೆ ಸಂಶಯಗೊಂಡ ಉರಗ ರಕ್ಷಕ ಸುರೇಶ್, ಅಂತರ್ಜಾಲದಲ್ಲಿ ಕೊಳಕು ಮಂಡಲ ಹಾವಿನ ಬಗ್ಗೆ ಮಾಹಿತಿ ಕಲೆಹಾಕಿದಾಗ ಕೊಳಕು ಮಂಡಲ ಮೊಟ್ಟೆಯಿಡದೆ ಮರಿ ಹಾಕುವ ಬಗ್ಗೆ ತಿಳಿದಿದೆ.

ಈ ಹಿಂದೆ ಹಾವಿನ ಮೊಟ್ಟೆಗೆ ಕೃತಕ ಶಾಖ ನೀಡಿ ಮರಿ ಮಾಡಿದ ಉರಗ ರಕ್ಷಕ, ಇದು ಗರ್ಭಿಣಿ ಇರಬಹುದು ಎಂದು ಸಂದೇಹಗೊಂಡರು. ಅಲ್ಲದೆ ತಡರಾತ್ರಿ ಆಗಿದ್ದರಿಂದ ಮರುದಿನ ಅರಣ್ಯಕ್ಕೆ ಬಿಡಲು ನಿರ್ಧರಿಸಿದರು. ಮನೆಯಲ್ಲಿ ಆರೈಕೆ ಮಾಡಿದ ಸುರೇಶ್ ಮರುದಿನ ಪರಿಶೀಲಿಸಿದಾಗ ಹಾವು ಸುಮಾರು 27 ಮರಿಗಳಿಗೆ ಜನ್ಮ ನೀಡಿದೆ.
ಮರಿ ಹಾಗೂ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ಮಾಲ್ದಾರೆ ಅರಣ್ಯ ವ್ಯಾಪ್ತಿಯ ಗೆದ್ದಿಗೆ ಬೆಟ್ಟದಲ್ಲಿ ಆರ್.ಐ.ಟಿ. ಅಧಿಕಾರಿಗಳಾದ ಮಣಿಕಂಠ ಮತ್ತು ಸಶಿ ಅವರ ನೇತೃತ್ವದಲ್ಲಿ ಹಾವು ಮತ್ತು ಮರಿಗಳನ್ನು ಸುರಕ್ಷಿತವಾಗಿ ಬಿಡಲಾಯಿತು.

ಹಾವನ್ನು ಕಂಡೊಡನೆ ಸಾಯಿಸುವ ಜನರ ಮಧ್ಯೆ ವಿಷಪೂರಿತ ಹಾವನ್ನು ಯಾವುದೇ ನೋವು ಮಾಡದೆ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಸುರೇಶ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಅದರಲ್ಲೂ ಆರೈಕೆ ಮಾಡಿ ಮರಿ ಮಾಡಿರುವ ಈ ಅಪರೂಪದ ಘಟನೆ ಸಾಮಾಜಿಕ ಜೀವನದಲ್ಲಿ ಬದುಕು ಹಕ್ಕು ಸರ್ವ ಜೀವ ಜಂತುಗಳಿಗೂ ಇದೆ ಎಂಬುವುದನ್ನು ಸಾಬಿತು ಪಡಿಸಿದೆ.
-ಅಭಿತ, ಗ್ರಾ.ಪಂ. ಸದಸ್ಯೆ ಸಿದ್ದಾಪುರ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

11 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

11 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

11 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

11 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

11 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

11 hours ago