ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂತಿಮ ನಮನ ಸಲ್ಲಿಸಿದ್ದಾರೆ.
ಯೋಧ ದಿವಿನ್ ಅವರ ಪಾರ್ಥಿವ ದರ್ಶನಕ್ಕೆ ಜಿಲ್ಲಾಡಳಿತ, ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಇಂದು(ಜನವರಿ.1) ಗ್ರಾಮಸ್ಥರು, ವಿದ್ಯಾರ್ಥಿಗಳು, ಆಲೂರು ಸಿದ್ದಾಪುರ ವ್ಯಾಪ್ತಿಯ ಹಲವಾರು ಗ್ರಾಮಗಳಿಂದ ಸಾಲುಗಟ್ಟಿ ಬರುತ್ತಿದ್ದು ಅಂತಿಮ ನಮನ ಸಲ್ಲಿಸಿದ್ದಾರೆ.
ತಮ್ಮೂರ ವೀರಯೋಧನಿಗೆ ಕಂಬನಿಯ ವಿದಾಯ ಹೇಳುತ್ತಿರುವ ಗ್ರಾಮಸ್ಥರು, ದಿವಿನ್ ಅಮರ್ ರಹೇ ಎಂದು ಘೋಷಣೆಯನ್ನು ಕೂಗಿದ್ದಾರೆ. ದಿವಾನ್ ಅಂತ್ಯ ಸಂಸ್ಕಾರದ ಪ್ರಯುಕ್ತ ಆಲೂರು ಸಿದ್ದಾಪುರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…