ಕುಶಾಲನಗರ : ಸಾಲ ಮಾಡಿಕೊಂಡು ಖಿನ್ನತೆಗೊಳಗಾಗಿದ್ದ ಸೈನಿಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ನಂಜಾಪುರದ ಮಂಜುನಾಥ ಶೆಟ್ಟಿ ಎಂಬವರ ಪುತ್ರ ಭೂ ಸೇನೆಯ ಬೆಂಗಳೂರಿನ ಆರ್.ಟಿ.ನಗರದ ಪ್ಯಾರಾಚೂಟ್ ರೆಜಮೆಂಟ್ನ ಸೈನಿಕ ಎಂ.ಚಂದ್ರಶೇಖರ್(೩೫) ಮೃತಪಟ್ಟವರು. ಇವರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಇದನ್ನು ಓದಿ; ಬಾಲ ಸೈನಿಕನಾಗಬೇಕಿದ್ದವನು ಬರಹಗಾರನಾದ!
ಸೈನಿಕ ಎಂ.ಚಂದ್ರಶೇಖರ್ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಪತ್ನಿ, ಮಕ್ಕಳು ಮನೆಯ ಹೊರಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತಂದೆ ಮಂಜುನಾಥಶೆಟ್ಟಿ ದೂರು ನೀಡಿದ್ದಾರೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್.ಐ. ಜಮೀರ್ ಅಹಮದ್ ತಿಳಿಸಿದ್ದಾರೆ. ತಿಂಗಳ ಹಿಂದೆ ರಜೆ ಮೇಲೆ ಮನೆಗೆ ಬಂದಿದ್ದರು. ದೀಪಾವಳಿ ಹಬ್ಬದ ನಂತರ ಕರ್ತವ್ಯಕ್ಕೆ ವಾಪಸ್ ತೆರಳಬೇಕಿತ್ತು. ಭಾನುವಾರ ಶವ ಪರೀಕ್ಷೆ ನಂತರ ಸ್ವಗ್ರಾಮ ನಂಜಾಪುರದಲ್ಲಿ ಅಂತ್ಯಕ್ರಿಯೆ ನಡೆಯಿತು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…