ಕುಶಾಲನಗರ : ಸಾಲ ಮಾಡಿಕೊಂಡು ಖಿನ್ನತೆಗೊಳಗಾಗಿದ್ದ ಸೈನಿಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ನಂಜಾಪುರದ ಮಂಜುನಾಥ ಶೆಟ್ಟಿ ಎಂಬವರ ಪುತ್ರ ಭೂ ಸೇನೆಯ ಬೆಂಗಳೂರಿನ ಆರ್.ಟಿ.ನಗರದ ಪ್ಯಾರಾಚೂಟ್ ರೆಜಮೆಂಟ್ನ ಸೈನಿಕ ಎಂ.ಚಂದ್ರಶೇಖರ್(೩೫) ಮೃತಪಟ್ಟವರು. ಇವರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಇದನ್ನು ಓದಿ; ಬಾಲ ಸೈನಿಕನಾಗಬೇಕಿದ್ದವನು ಬರಹಗಾರನಾದ!
ಸೈನಿಕ ಎಂ.ಚಂದ್ರಶೇಖರ್ ಕೆ.ಎಸ್.ಆರ್.ಟಿ.ಸಿ. ಡಿಪೋ ಹಿಂಭಾಗದ ಹೊಸ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಪತ್ನಿ, ಮಕ್ಕಳು ಮನೆಯ ಹೊರಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತಂದೆ ಮಂಜುನಾಥಶೆಟ್ಟಿ ದೂರು ನೀಡಿದ್ದಾರೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್.ಐ. ಜಮೀರ್ ಅಹಮದ್ ತಿಳಿಸಿದ್ದಾರೆ. ತಿಂಗಳ ಹಿಂದೆ ರಜೆ ಮೇಲೆ ಮನೆಗೆ ಬಂದಿದ್ದರು. ದೀಪಾವಳಿ ಹಬ್ಬದ ನಂತರ ಕರ್ತವ್ಯಕ್ಕೆ ವಾಪಸ್ ತೆರಳಬೇಕಿತ್ತು. ಭಾನುವಾರ ಶವ ಪರೀಕ್ಷೆ ನಂತರ ಸ್ವಗ್ರಾಮ ನಂಜಾಪುರದಲ್ಲಿ ಅಂತ್ಯಕ್ರಿಯೆ ನಡೆಯಿತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…