ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ ರಸ್ತೆಗೆ ಮಣ್ಣು ಜಾರುತ್ತಿವೆ.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪದ ಜೇಡಿಗುಂಡಿ ಬಳಿ ಗುಡ್ಡದಿಂದ ರಸ್ತೆಗೆ ಮಣ್ಣು ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಕೆಎಸ್ಆರ್ಟಿಸಿ ಬಸ್ ಪಾರಾಗಿದೆ.
ಚಲಿಸುತ್ತಿದ್ದ ಬಸ್ ಮುಂದೆಯೇ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿತ್ತು. ತಕ್ಷಣ ಎಚ್ಚೆತ್ತ ಬಸ್ ಚಾಲಕ ಬಸ್ ನಿಲ್ಲಿಸಿದ. ಗುಡ್ಡ ಕುಸಿತದಿಂದ ಕೆಲಕಾಲ ಸೋಮವಾರಪೇಟೆ ಶಾಂತಳ್ಳಿ ರಸ್ತೆ ಸಂಚಾರ ಕಡಿತಗೊಂಡು. ಸುಮಾರು ಒಂದು ಗಂಟೆಗೂ ಹೆಚ್ಚು ಸಾಲು ಗಟ್ಟಿ ವಾಹನಗಳು ನಿಂತಿದ್ದವು.
ಸ್ಥಳೀಯರು ಹಾಗೂ ಪಂಚಾಯತ್ ಸಿಬ್ಬಂದಿ ನೆರವಿನಿಂದ ರಸ್ತೆಗೆ ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…