ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ ರಸ್ತೆಗೆ ಮಣ್ಣು ಜಾರುತ್ತಿವೆ.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪದ ಜೇಡಿಗುಂಡಿ ಬಳಿ ಗುಡ್ಡದಿಂದ ರಸ್ತೆಗೆ ಮಣ್ಣು ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಕೆಎಸ್ಆರ್ಟಿಸಿ ಬಸ್ ಪಾರಾಗಿದೆ.
ಚಲಿಸುತ್ತಿದ್ದ ಬಸ್ ಮುಂದೆಯೇ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿತ್ತು. ತಕ್ಷಣ ಎಚ್ಚೆತ್ತ ಬಸ್ ಚಾಲಕ ಬಸ್ ನಿಲ್ಲಿಸಿದ. ಗುಡ್ಡ ಕುಸಿತದಿಂದ ಕೆಲಕಾಲ ಸೋಮವಾರಪೇಟೆ ಶಾಂತಳ್ಳಿ ರಸ್ತೆ ಸಂಚಾರ ಕಡಿತಗೊಂಡು. ಸುಮಾರು ಒಂದು ಗಂಟೆಗೂ ಹೆಚ್ಚು ಸಾಲು ಗಟ್ಟಿ ವಾಹನಗಳು ನಿಂತಿದ್ದವು.
ಸ್ಥಳೀಯರು ಹಾಗೂ ಪಂಚಾಯತ್ ಸಿಬ್ಬಂದಿ ನೆರವಿನಿಂದ ರಸ್ತೆಗೆ ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…