ಮಡೀಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು(ಜು.25)ಸಹ ಭಾರಿ ಗಾಳಿ, ಮಳೆ ಮುಂದುವರೆದಿದ್ದು, ರಭಸದಿಂದ ಬೀಸುತ್ತಿರುವ ಗಾಳಿಗೆ ಮರಗಳು ನೆಲಕಚ್ಚುತ್ತಿದ್ದು, ಗುಡ್ಡದಿಂದ ರಸ್ತೆಗೆ ಮಣ್ಣು ಜಾರುತ್ತಿವೆ.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪದ ಜೇಡಿಗುಂಡಿ ಬಳಿ ಗುಡ್ಡದಿಂದ ರಸ್ತೆಗೆ ಮಣ್ಣು ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಕೆಎಸ್ಆರ್ಟಿಸಿ ಬಸ್ ಪಾರಾಗಿದೆ.
ಚಲಿಸುತ್ತಿದ್ದ ಬಸ್ ಮುಂದೆಯೇ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿತ್ತು. ತಕ್ಷಣ ಎಚ್ಚೆತ್ತ ಬಸ್ ಚಾಲಕ ಬಸ್ ನಿಲ್ಲಿಸಿದ. ಗುಡ್ಡ ಕುಸಿತದಿಂದ ಕೆಲಕಾಲ ಸೋಮವಾರಪೇಟೆ ಶಾಂತಳ್ಳಿ ರಸ್ತೆ ಸಂಚಾರ ಕಡಿತಗೊಂಡು. ಸುಮಾರು ಒಂದು ಗಂಟೆಗೂ ಹೆಚ್ಚು ಸಾಲು ಗಟ್ಟಿ ವಾಹನಗಳು ನಿಂತಿದ್ದವು.
ಸ್ಥಳೀಯರು ಹಾಗೂ ಪಂಚಾಯತ್ ಸಿಬ್ಬಂದಿ ನೆರವಿನಿಂದ ರಸ್ತೆಗೆ ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…