ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ.
ನೆನ್ನೆ ತಡರಾತ್ರಿ ಗ್ರಾಮದ ನಿವಾಸಿ ಪುಷ್ಪ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಪುಷ್ಪ ಅವರು ತಮ್ಮ ಮೊಮ್ಮಗ ಹರ್ಷಿತ್ನೊಂದಿಗೆ ಗಾಢ ನಿದ್ರೆಯಲ್ಲಿದ್ದರು. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ ಎಚ್ಚರಗೊಂಡ ಪುಷ್ಪ ಅವರು ತಕ್ಷಣ ಅಕ್ಕಪಕ್ಕದವರಿಗೆ ಕೂಗಿ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಅವರು ಧಾವಿಸಿ ಬಂದು ಮನೆಯೊಳಗೆ ಸಿಲುಕಿಕೊಂಡಿದ್ದ ಬಾಲಕ ಹರ್ಷಿತ್ನನ್ನು ಸುರಕ್ಷಿತವಾಗಿ ಹೊರಕ್ಕೆ ತಂದರು. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ತೀವ್ರವಾಗಿದ್ದರಿಂದ ಸಾಧ್ಯವಾಗಲಿಲ್ಲ. ತಕ್ಷಣ ಸೋಮವಾರಪೇಟೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು.
ಬೆಂಕಿಯಿಂದ ಮನೆಯ ಎಲ್ಲಾ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಫರ್ನಿಚರ್, ಬಟ್ಟೆಗಳು, ಆಹಾರ ಸಾಮಗ್ರಿ, ವೈಯಕ್ತಿಕ ದಾಖಲೆಗಳು ಹಾಗೂ ಇತರ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಅಂದಾಜು ನಷ್ಟ 5 ಲಕ್ಷಕ್ಕಿಂತ ಹೆಚ್ಚು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪುಷ್ಪ ಮತ್ತು ಹರ್ಷಿತ್ ಸುರಕ್ಷಿತರಾಗಿದ್ದು, ಸ್ಥಳೀಯರ ಸಹಾಯದಿಂದ ತಾತ್ಕಾಲಿಕವಾಗಿ ಇತರ ಮನೆಯಲ್ಲಿ ತಂಗಿದ್ದಾರೆ. ಗ್ರಾಮಸ್ಥರು ಅವರಿಗೆ ಆಹಾರ, ಬಟ್ಟೆ ಮತ್ತು ಇತರ ಸಹಾಯ ನೀಡುತ್ತಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯ ನಿಖರ ಕಾರಣ ಶೀಘ್ರದಲ್ಲೇ ತಿಳಿಯಲಿದೆ ಎಂದು ತಿಳಿದುಬಂದಿದೆ.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…