ಕೊಡಗು

ಸೋಮವಾರಪೇಟೆ | ಸಂಚಾರ ನಿಯಮ ಉಲ್ಲಂಘನೆ ; ಬೈಕ್‌ ಸವಾರನಿಗೆ 18500 ರೂ. ದಂಡದ ಬಿಸಿ

ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.

ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ಕಾರ್ಯಾಚರಣೆಗಿಳಿದು ‌ಈತನ ಬೈಕ್ ತಡೆದು ನಿಲ್ಲಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದು ಮತ್ತು ಅಗತ್ಯ ದಾಖಲೆಗಳಿಲ್ಲದಿರುವುದು ಪತ್ತೆ ಆಗಿದೆ.

ಹೀಗೆ… ಬೈಕಿಮ ಸೈಲೆನ್ಸರ್ ಮಾಡಿಫೈ ಮಾಡಿದಕ್ಕೆ ರೂ. 500, ಕ್ರಮಬದ್ಧವಲ್ಲದ ನಂಬರ್ ಪ್ಲೇಟ್ ಆಳವಡಿಸಿದಕ್ಕಾಗಿ ರೂ. 500, ಚಾಲನಾ ಪರವಾನಗಿ ಇಲ್ಲದಿರುವುದಕ್ಕೆ ರೂ. 1000, ಅಪಾಯಕಾರಿ ಚಾಲನೆಗಾಗಿ ರೂ. 1000, ಸಂಚಾರಿ ನಿಯಮ ಉಲ್ಲಂಘನೆಗಾಗಿ ರೂ. 500, ಪೊಲೀಸರು ಸಿಗ್ನಲ್ ನೀಡಿದರೂ ನಿಲ್ಲಿಸದೇ ತೆರಳಿದಕ್ಕೆ ರೂ. 500, ರೇಸಿಂಗ್ ನಂತೆ ಅತೀವೇಗದಿಂದ ಚಾಲನೆ ಮಾಡಿದಕ್ಕಾಗಿ ರೂ. 5000, ಸುಳ್ಳು ಮಾಹಿತಿ ನೀಡಿದಕ್ಕಾಗಿ ರೂ. 1000, ಪ್ರಿ ವೀಲಿಂಗ್ ಮಾಡಿದಕ್ಕಾಗಿ ರೂ. 5000, ವಾಹನ ವಿಮೆ ಇಲ್ಲದಿದಕ್ಕಾಗಿ ರೂ. 1000, ಚಾಲನೆ ಸಂದರ್ಭ ಮೊಬೈಲ್ ಬಳಸಿದಕ್ಕಾಗಿ 1500, ದಾಖಲೆಗಳನ್ನು ಸಲ್ಲಿಸದಿರುವುದಕ್ಕೆ ರೂ. 500, ಹೆಲ್ಮೆಟ್ ಧರಿಸದಿರುವುದಕ್ಕೆ ರೂ. 500 ರಂತೆ ಒಟ್ಟು 18500 ರೂ. ದಂಡ ವಿಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

1.65 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಬೆಳಕು

ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…

6 seconds ago

‘ನಾನು ಬೆಳೆಸಿದ ಕಾಡಿನಲ್ಲಿ ನನಗೆ ವಾಸಕ್ಕೆ ಜಾಗ ಇಲ್ವಾ?’

ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…

6 mins ago

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

10 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

13 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

14 hours ago