ಕೊಡಗು

ಸೋಮವಾರಪೇಟೆ | ಸಂಚಾರ ನಿಯಮ ಉಲ್ಲಂಘನೆ ; ಬೈಕ್‌ ಸವಾರನಿಗೆ 18500 ರೂ. ದಂಡದ ಬಿಸಿ

ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.

ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ಕಾರ್ಯಾಚರಣೆಗಿಳಿದು ‌ಈತನ ಬೈಕ್ ತಡೆದು ನಿಲ್ಲಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದು ಮತ್ತು ಅಗತ್ಯ ದಾಖಲೆಗಳಿಲ್ಲದಿರುವುದು ಪತ್ತೆ ಆಗಿದೆ.

ಹೀಗೆ… ಬೈಕಿಮ ಸೈಲೆನ್ಸರ್ ಮಾಡಿಫೈ ಮಾಡಿದಕ್ಕೆ ರೂ. 500, ಕ್ರಮಬದ್ಧವಲ್ಲದ ನಂಬರ್ ಪ್ಲೇಟ್ ಆಳವಡಿಸಿದಕ್ಕಾಗಿ ರೂ. 500, ಚಾಲನಾ ಪರವಾನಗಿ ಇಲ್ಲದಿರುವುದಕ್ಕೆ ರೂ. 1000, ಅಪಾಯಕಾರಿ ಚಾಲನೆಗಾಗಿ ರೂ. 1000, ಸಂಚಾರಿ ನಿಯಮ ಉಲ್ಲಂಘನೆಗಾಗಿ ರೂ. 500, ಪೊಲೀಸರು ಸಿಗ್ನಲ್ ನೀಡಿದರೂ ನಿಲ್ಲಿಸದೇ ತೆರಳಿದಕ್ಕೆ ರೂ. 500, ರೇಸಿಂಗ್ ನಂತೆ ಅತೀವೇಗದಿಂದ ಚಾಲನೆ ಮಾಡಿದಕ್ಕಾಗಿ ರೂ. 5000, ಸುಳ್ಳು ಮಾಹಿತಿ ನೀಡಿದಕ್ಕಾಗಿ ರೂ. 1000, ಪ್ರಿ ವೀಲಿಂಗ್ ಮಾಡಿದಕ್ಕಾಗಿ ರೂ. 5000, ವಾಹನ ವಿಮೆ ಇಲ್ಲದಿದಕ್ಕಾಗಿ ರೂ. 1000, ಚಾಲನೆ ಸಂದರ್ಭ ಮೊಬೈಲ್ ಬಳಸಿದಕ್ಕಾಗಿ 1500, ದಾಖಲೆಗಳನ್ನು ಸಲ್ಲಿಸದಿರುವುದಕ್ಕೆ ರೂ. 500, ಹೆಲ್ಮೆಟ್ ಧರಿಸದಿರುವುದಕ್ಕೆ ರೂ. 500 ರಂತೆ ಒಟ್ಟು 18500 ರೂ. ದಂಡ ವಿಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago