ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಮಾಲಂಬಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಬೆಟ್ಟದ ಮಳೆಮಲ್ಲೇಶ್ವರ ಹಾಗು ಬಸವಣ್ಣ ದೇವರಿಗೆ ಸಾಮೂಹಿಕ ಪೂಜೆ ಸಲ್ಲಿಸಿ, ಮಳೆಗಾಗಿ ಪ್ರಾರ್ಥಿಸಿದರು.
ಅರೇಬಿಕಾ ಕಾಫಿ ತೋಟಗಳಿಗೆ ಅಲ್ಪ ಸ್ವಲ್ಪ ಮಳೆ ಬಿದ್ದ ಪರಿಣಾಮ ಶೇ.೫೦ರಷ್ಟು ಕಾಫಿ ಬ್ಲಾಸಂ ಆಗಿದೆ. ಈ ಸಂದರ್ಭದಲ್ಲಿ ಮಳೆ ಬಿದ್ದರೆ, ಮಾತ್ರ ಫಸಲು ಉಳಿಯುತ್ತದೆ. ಈಗ ಮಳೆ ಬೀಳದ ಹಿನ್ನೆಲೆಯಲ್ಲಿ ಕೃಷಿಕರು ಆತಂಕಗೊಂಡಿದ್ದಾರೆ. ಈ ಕಾರಣದಿಂದ ಮಳೆಗಾಗಿ ದೇವರ ಮೊರೆ ಹೋಗಿದ್ದೇವೆ ಎಂದು ಹಿರಿಕರ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ.ಶಿವಪ್ರಕಾಶ್ ಹೇಳಿದರು.
ಕಾರ್ಯದರ್ಶಿ ಕೀರ್ತಿ ಮುತ್ತಣ್ಣ, ಖಜಾಂಚಿ ಸಿ.ಎಲ್.ವೆಂಕಟೇಶ್, ಸಲಹೆಗಾರ ಎಚ್.ಪಿ.ಸುರೇಶ್ ಸೇರಿದಂತೆ ಗ್ರಾಮದ ಹಿರಿಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…