ಕೊಡಗು

ದಶ ದೇವಾಲಯದಲ್ಲಿ ಯದುವೀರ್‌ ವಿಶೇಷ ಪೂಜೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ಗುರುವಾರ ಮಡಿಕೇರಿಯ ವಿವಿಧ ದೇವಾಲಯಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೋಟೆ ಮಹಾಗಣಪತಿ ದೇವಾಲಯ, ಓಂಕಾರೇಶ್ವರ ದೇವಾಲಯ, ನಾಲ್ಕು ಕರಗ ದೇವಾಲಯಗಳು, ದಶಮಂಟಪಗಳ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಸಂಸದರು, ಹಿಂದೆ ನಡೆಸಿಕೊಂಡು ಬಂದ ರೀತಿಯಲ್ಲೇ ದಸರಾವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಈಗಾಗಲೇ ಮೈಸೂರಿನಲ್ಲೂ ದಸರಾ ಸಿದ್ಧತೆಗಳು ಆರಂಭವಾಗಿವೆ. ಮೈಸೂರಿನಲ್ಲಿ ಸಾಂಪ್ರದಾಯಿಕ ಪೂಜೆಗಳು ಆರಂಭವಾದ ಬಳಿಕ ಮಡಿಕೇರಿ ದಸರಾದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಡಿಕೇರಿ ದಸರಾ ಸಂಬಂಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿರುವುದಾಗಿ ತಿಳಿಸಿದರು.

ಬಾನು ಮುಷ್ತಾಕ್ ಸ್ಪಷ್ಟೀಕರಣ ನೀಡಲಿ
ಕನ್ನಡಿಗರು ಆರಾಧ್ಯ ದೈವ ಎಂದು ಭಾವಿಸಿರುವ ಭುವನೇಶ್ವರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನಮ್ಮ ವಿರೋಧವಿದ್ದು, ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್ ಮೊದಲು ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಸಂಸದ ಯದುವೀರ್ ಹೇಳಿದರು.

ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯಕ್ಕೆ ವೈಯಕ್ತಿಕ ಅರ್ಜಿ ಸಲ್ಲಿಕೆಯಾಗಿತ್ತು. ನಾವು ನ್ಯಾಯಾಲಯಕ್ಕೆ ಹೋಗಿಲ್ಲ. ಆದರೆ ಈ ಬಗ್ಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಭುವನೇಶ್ವರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನಮ್ಮ ವಿರೋಧವಿದೆ. ಇದಕ್ಕೆ ಅವರು ಮೊದಲು ಸ್ಪಷ್ಟೀಕರಣ ನೀಡಬೇಕು. ಹಿಂದೂ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಅವರು ಬರಲಿ ಎಂಬುದು ನಮ್ಮ ಉದ್ದೇಶ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮದ್ದೂರು, ಚಾಮುಂಡಿ ಬೆಟ್ಟ, ನಾಗಮಂಗಲ ಮೊದಲಾದೆಡೆ ನಡೆದ ಕೃತ್ಯಗಳ ಬಗ್ಗೆ ಜನರೇ ಉತ್ತರ ಕೊಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

10 mins ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

48 mins ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

1 hour ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

1 hour ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

3 hours ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

3 hours ago