Dasha Temple
ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ಗುರುವಾರ ಮಡಿಕೇರಿಯ ವಿವಿಧ ದೇವಾಲಯಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೋಟೆ ಮಹಾಗಣಪತಿ ದೇವಾಲಯ, ಓಂಕಾರೇಶ್ವರ ದೇವಾಲಯ, ನಾಲ್ಕು ಕರಗ ದೇವಾಲಯಗಳು, ದಶಮಂಟಪಗಳ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಸಂಸದರು, ಹಿಂದೆ ನಡೆಸಿಕೊಂಡು ಬಂದ ರೀತಿಯಲ್ಲೇ ದಸರಾವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಈಗಾಗಲೇ ಮೈಸೂರಿನಲ್ಲೂ ದಸರಾ ಸಿದ್ಧತೆಗಳು ಆರಂಭವಾಗಿವೆ. ಮೈಸೂರಿನಲ್ಲಿ ಸಾಂಪ್ರದಾಯಿಕ ಪೂಜೆಗಳು ಆರಂಭವಾದ ಬಳಿಕ ಮಡಿಕೇರಿ ದಸರಾದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಡಿಕೇರಿ ದಸರಾ ಸಂಬಂಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿರುವುದಾಗಿ ತಿಳಿಸಿದರು.
ಬಾನು ಮುಷ್ತಾಕ್ ಸ್ಪಷ್ಟೀಕರಣ ನೀಡಲಿ
ಕನ್ನಡಿಗರು ಆರಾಧ್ಯ ದೈವ ಎಂದು ಭಾವಿಸಿರುವ ಭುವನೇಶ್ವರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನಮ್ಮ ವಿರೋಧವಿದ್ದು, ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್ ಮೊದಲು ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಸಂಸದ ಯದುವೀರ್ ಹೇಳಿದರು.
ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯಕ್ಕೆ ವೈಯಕ್ತಿಕ ಅರ್ಜಿ ಸಲ್ಲಿಕೆಯಾಗಿತ್ತು. ನಾವು ನ್ಯಾಯಾಲಯಕ್ಕೆ ಹೋಗಿಲ್ಲ. ಆದರೆ ಈ ಬಗ್ಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಭುವನೇಶ್ವರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನಮ್ಮ ವಿರೋಧವಿದೆ. ಇದಕ್ಕೆ ಅವರು ಮೊದಲು ಸ್ಪಷ್ಟೀಕರಣ ನೀಡಬೇಕು. ಹಿಂದೂ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಅವರು ಬರಲಿ ಎಂಬುದು ನಮ್ಮ ಉದ್ದೇಶ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮದ್ದೂರು, ಚಾಮುಂಡಿ ಬೆಟ್ಟ, ನಾಗಮಂಗಲ ಮೊದಲಾದೆಡೆ ನಡೆದ ಕೃತ್ಯಗಳ ಬಗ್ಗೆ ಜನರೇ ಉತ್ತರ ಕೊಡುತ್ತಾರೆ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…