ಕೊಡಗು

ದಶ ದೇವಾಲಯದಲ್ಲಿ ಯದುವೀರ್‌ ವಿಶೇಷ ಪೂಜೆ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ಗುರುವಾರ ಮಡಿಕೇರಿಯ ವಿವಿಧ ದೇವಾಲಯಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೋಟೆ ಮಹಾಗಣಪತಿ ದೇವಾಲಯ, ಓಂಕಾರೇಶ್ವರ ದೇವಾಲಯ, ನಾಲ್ಕು ಕರಗ ದೇವಾಲಯಗಳು, ದಶಮಂಟಪಗಳ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಸಂಸದರು, ಹಿಂದೆ ನಡೆಸಿಕೊಂಡು ಬಂದ ರೀತಿಯಲ್ಲೇ ದಸರಾವನ್ನು ನಡೆಸಿಕೊಂಡು ಹೋಗಬೇಕಾಗಿದೆ. ಈಗಾಗಲೇ ಮೈಸೂರಿನಲ್ಲೂ ದಸರಾ ಸಿದ್ಧತೆಗಳು ಆರಂಭವಾಗಿವೆ. ಮೈಸೂರಿನಲ್ಲಿ ಸಾಂಪ್ರದಾಯಿಕ ಪೂಜೆಗಳು ಆರಂಭವಾದ ಬಳಿಕ ಮಡಿಕೇರಿ ದಸರಾದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಡಿಕೇರಿ ದಸರಾ ಸಂಬಂಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿರುವುದಾಗಿ ತಿಳಿಸಿದರು.

ಬಾನು ಮುಷ್ತಾಕ್ ಸ್ಪಷ್ಟೀಕರಣ ನೀಡಲಿ
ಕನ್ನಡಿಗರು ಆರಾಧ್ಯ ದೈವ ಎಂದು ಭಾವಿಸಿರುವ ಭುವನೇಶ್ವರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನಮ್ಮ ವಿರೋಧವಿದ್ದು, ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್ ಮೊದಲು ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಸಂಸದ ಯದುವೀರ್ ಹೇಳಿದರು.

ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯಕ್ಕೆ ವೈಯಕ್ತಿಕ ಅರ್ಜಿ ಸಲ್ಲಿಕೆಯಾಗಿತ್ತು. ನಾವು ನ್ಯಾಯಾಲಯಕ್ಕೆ ಹೋಗಿಲ್ಲ. ಆದರೆ ಈ ಬಗ್ಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಭುವನೇಶ್ವರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನಮ್ಮ ವಿರೋಧವಿದೆ. ಇದಕ್ಕೆ ಅವರು ಮೊದಲು ಸ್ಪಷ್ಟೀಕರಣ ನೀಡಬೇಕು. ಹಿಂದೂ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಅವರು ಬರಲಿ ಎಂಬುದು ನಮ್ಮ ಉದ್ದೇಶ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮದ್ದೂರು, ಚಾಮುಂಡಿ ಬೆಟ್ಟ, ನಾಗಮಂಗಲ ಮೊದಲಾದೆಡೆ ನಡೆದ ಕೃತ್ಯಗಳ ಬಗ್ಗೆ ಜನರೇ ಉತ್ತರ ಕೊಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

9 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

13 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

15 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago