ಕೊಡಗು

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು ಅನಾಹುತ ತಪ್ಪಿಸಲು ಬೀದಿ ಶ್ವಾನವನ್ನು ಹೊಡೆದು ಸಾಯಿಸಿದ್ದಾರೆ.

ಯುವನಿಕಾ(13), ವಿ.ಆರ್.ಗ್ರಹಿತ (10), ಶ್ರೀನಿವಾಸ್ (45), ತಜವೀಯ (25) ಗಾಯಗೊಂಡವರು. ಶನಿವಾರ ಬೆಳಿಗ್ಗೆ 8.50ರ ಸಮಯದಲ್ಲಿ ಮೈಸೂರಮ್ಮ ನಗರದಿಂದ ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಇನ್ನಿಬ್ಬರ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಪರಿಣಾಮ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನು ಓದಿ: ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಗೋಣಿಕೊಪ್ಪ ಸಮುದಾಯ ಆಸ್ಪತ್ರೆಯಲ್ಲಿ ಡಾ.ಗ್ರೀಷ್ಮ ಬೋಜಮ್ಮ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಏತನ್ಮಧ್ಯೆ, ವಿದ್ಯಾರ್ಥಿಗಳು ಮತ್ತು ಜನರ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಯಿಂದ ಮತ್ತಷ್ಟು ಸಂಭವಿಸಬಹುದಾದ ಅನಾಹುತ ತಪ್ಪಿಸುವ ಸಲುವಾಗಿ ಸಾರ್ವಜನಿಕರು ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ.

ಗೋಣಿಕೊಪ್ಪದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು,ರಸ್ತೆಯಲ್ಲಿ ತೆರಳಲು ಭಯಪಡುವಂತಾಗಿದೆ. ಸಣ್ಣ ಮಕ್ಕಳು, ವೃದ್ಧರ ಮೇಲೆ ದಾಳಿ ನಡೆಸುತ್ತಿವೆ. ಕೈಯಲ್ಲಿ ವಸ್ತುಗಳನ್ನು ಹಿಡಿದು ನಡೆದು ಹೋಗುತ್ತಿರುವಾಗ ದಾಳಿಗೆ ಮುಂದಾಗುತ್ತಿವೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸ್ಥಳೀಯ ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

2 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

2 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

2 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

2 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

2 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

2 hours ago