ಕೊಡಗು

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು ಅನಾಹುತ ತಪ್ಪಿಸಲು ಬೀದಿ ಶ್ವಾನವನ್ನು ಹೊಡೆದು ಸಾಯಿಸಿದ್ದಾರೆ.

ಯುವನಿಕಾ(13), ವಿ.ಆರ್.ಗ್ರಹಿತ (10), ಶ್ರೀನಿವಾಸ್ (45), ತಜವೀಯ (25) ಗಾಯಗೊಂಡವರು. ಶನಿವಾರ ಬೆಳಿಗ್ಗೆ 8.50ರ ಸಮಯದಲ್ಲಿ ಮೈಸೂರಮ್ಮ ನಗರದಿಂದ ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಇನ್ನಿಬ್ಬರ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಪರಿಣಾಮ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನು ಓದಿ: ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಗೋಣಿಕೊಪ್ಪ ಸಮುದಾಯ ಆಸ್ಪತ್ರೆಯಲ್ಲಿ ಡಾ.ಗ್ರೀಷ್ಮ ಬೋಜಮ್ಮ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಏತನ್ಮಧ್ಯೆ, ವಿದ್ಯಾರ್ಥಿಗಳು ಮತ್ತು ಜನರ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಯಿಂದ ಮತ್ತಷ್ಟು ಸಂಭವಿಸಬಹುದಾದ ಅನಾಹುತ ತಪ್ಪಿಸುವ ಸಲುವಾಗಿ ಸಾರ್ವಜನಿಕರು ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ.

ಗೋಣಿಕೊಪ್ಪದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು,ರಸ್ತೆಯಲ್ಲಿ ತೆರಳಲು ಭಯಪಡುವಂತಾಗಿದೆ. ಸಣ್ಣ ಮಕ್ಕಳು, ವೃದ್ಧರ ಮೇಲೆ ದಾಳಿ ನಡೆಸುತ್ತಿವೆ. ಕೈಯಲ್ಲಿ ವಸ್ತುಗಳನ್ನು ಹಿಡಿದು ನಡೆದು ಹೋಗುತ್ತಿರುವಾಗ ದಾಳಿಗೆ ಮುಂದಾಗುತ್ತಿವೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸ್ಥಳೀಯ ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

12 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

12 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

12 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

12 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

13 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

13 hours ago