ಕೊಡಗು

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು ಅನಾಹುತ ತಪ್ಪಿಸಲು ಬೀದಿ ಶ್ವಾನವನ್ನು ಹೊಡೆದು ಸಾಯಿಸಿದ್ದಾರೆ.

ಯುವನಿಕಾ(13), ವಿ.ಆರ್.ಗ್ರಹಿತ (10), ಶ್ರೀನಿವಾಸ್ (45), ತಜವೀಯ (25) ಗಾಯಗೊಂಡವರು. ಶನಿವಾರ ಬೆಳಿಗ್ಗೆ 8.50ರ ಸಮಯದಲ್ಲಿ ಮೈಸೂರಮ್ಮ ನಗರದಿಂದ ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಇನ್ನಿಬ್ಬರ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಪರಿಣಾಮ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನು ಓದಿ: ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಗೋಣಿಕೊಪ್ಪ ಸಮುದಾಯ ಆಸ್ಪತ್ರೆಯಲ್ಲಿ ಡಾ.ಗ್ರೀಷ್ಮ ಬೋಜಮ್ಮ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಏತನ್ಮಧ್ಯೆ, ವಿದ್ಯಾರ್ಥಿಗಳು ಮತ್ತು ಜನರ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಯಿಂದ ಮತ್ತಷ್ಟು ಸಂಭವಿಸಬಹುದಾದ ಅನಾಹುತ ತಪ್ಪಿಸುವ ಸಲುವಾಗಿ ಸಾರ್ವಜನಿಕರು ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ.

ಗೋಣಿಕೊಪ್ಪದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು,ರಸ್ತೆಯಲ್ಲಿ ತೆರಳಲು ಭಯಪಡುವಂತಾಗಿದೆ. ಸಣ್ಣ ಮಕ್ಕಳು, ವೃದ್ಧರ ಮೇಲೆ ದಾಳಿ ನಡೆಸುತ್ತಿವೆ. ಕೈಯಲ್ಲಿ ವಸ್ತುಗಳನ್ನು ಹಿಡಿದು ನಡೆದು ಹೋಗುತ್ತಿರುವಾಗ ದಾಳಿಗೆ ಮುಂದಾಗುತ್ತಿವೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸ್ಥಳೀಯ ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

12 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

21 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

21 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

21 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

21 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

21 hours ago