stray dogs bite for 4 members at a day
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು ಅನಾಹುತ ತಪ್ಪಿಸಲು ಬೀದಿ ಶ್ವಾನವನ್ನು ಹೊಡೆದು ಸಾಯಿಸಿದ್ದಾರೆ.
ಯುವನಿಕಾ(13), ವಿ.ಆರ್.ಗ್ರಹಿತ (10), ಶ್ರೀನಿವಾಸ್ (45), ತಜವೀಯ (25) ಗಾಯಗೊಂಡವರು. ಶನಿವಾರ ಬೆಳಿಗ್ಗೆ 8.50ರ ಸಮಯದಲ್ಲಿ ಮೈಸೂರಮ್ಮ ನಗರದಿಂದ ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮತ್ತು ಇನ್ನಿಬ್ಬರ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಪರಿಣಾಮ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.
ಇದನ್ನು ಓದಿ: ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ
ಗೋಣಿಕೊಪ್ಪ ಸಮುದಾಯ ಆಸ್ಪತ್ರೆಯಲ್ಲಿ ಡಾ.ಗ್ರೀಷ್ಮ ಬೋಜಮ್ಮ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಏತನ್ಮಧ್ಯೆ, ವಿದ್ಯಾರ್ಥಿಗಳು ಮತ್ತು ಜನರ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಯಿಂದ ಮತ್ತಷ್ಟು ಸಂಭವಿಸಬಹುದಾದ ಅನಾಹುತ ತಪ್ಪಿಸುವ ಸಲುವಾಗಿ ಸಾರ್ವಜನಿಕರು ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ.
ಗೋಣಿಕೊಪ್ಪದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು,ರಸ್ತೆಯಲ್ಲಿ ತೆರಳಲು ಭಯಪಡುವಂತಾಗಿದೆ. ಸಣ್ಣ ಮಕ್ಕಳು, ವೃದ್ಧರ ಮೇಲೆ ದಾಳಿ ನಡೆಸುತ್ತಿವೆ. ಕೈಯಲ್ಲಿ ವಸ್ತುಗಳನ್ನು ಹಿಡಿದು ನಡೆದು ಹೋಗುತ್ತಿರುವಾಗ ದಾಳಿಗೆ ಮುಂದಾಗುತ್ತಿವೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಸ್ಥಳೀಯ ಆಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…