ಮಡಿಕೇರಿ: ಇಲ್ಲಿನ ಸುಂಟಿಕೊಪ್ಪದ ಪನ್ಯ ಗ್ರಾಮದ ಮಾರಿಗುಡಿ ಬಳಿಯ ಕಾಫಿ ತೋಟದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹವು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಸುಂಟಿಕೊಪ್ಪ ಮಾದಾಪುರ ರಸ್ತೆಯ ಪನ್ಯದಲ್ಲಿರುವ ಸಂದೇಶ್ ಎಂಬವರಿಗೆ ಸೇರಿದ ಮಾರಿಗುಡಿಯ ಸಮೀಪದ ಕಾಫಿ ತೋಟದಲ್ಲಿ ಅಂದಾಜು 45 ರಿಂದ 50 ವಯಸ್ಸಿನ ಅಪರಿಚಿತ ಪುರುಷನ ಮೃತದೇಹದ ಅಂಗಾಂಗಳು ಮಂಗಳವಾರ ಪತ್ತೆಯಾಗಿವೆ.
ಈ ಕುರಿತು ತೋಟದ ಮಾಲೀಕರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ತಿಳಿಸಿದ ಮೇರೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ವ್ಯಕ್ತಿಯನ್ನು ಕಳೆದ 4 ದಿನಗಳ ಹಿಂದೆ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟ ಮೃತದೇಹದ ಒಂದು ಕಾಲು ಹಾಗೂ ಇತರೆ ಭಾಗಗಳು ಪತ್ತೆಯಾಗಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ರಾಮರಾಜನ್, ಡಿವೈಎಸ್ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…