Student Death
ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಏನಿದು ಘಟನೆ ?
ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಅವರ ಪುತ್ರ ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲೇ ಇರುವ ಖಾಸಗಿ ಕ್ಲಿನಿಕ್ಗೆ ತೆರಳಿದ್ದಾರೆ. ಇವರನ್ನು ಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಮಾತ್ರೆ ಜೊತೆಗೆ ಇಂಜೆಕ್ಷನ್ ಕೂಡ ನೀಡಿದ್ದಾರೆ. ಆದರೂ ನೋವು ಕಡಿಮೆಯಾಗದ ಕಾರಣ ಮತ್ತೊಂದು ಇಂಜೆಕ್ಷನ್ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕ್ಲಿನಿಕ್ನಿಂದ ಮನೆಗೆ ಆಗಮಿಸಿದ ವಿನೋದ್ ಕೆಲವೇ ಹೊತ್ತಿನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ಕರೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿನೋದ್ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:-ಮತ್ತೆ ಕೆಂಪಾದ JNU : ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು
ಮೃತ ವಿನೋದ್ಗೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಕಳೆದ ಕೆಲವು ದಿನಗಳಿಂದ ತಮ್ಮ ಮನೆಯನ್ನ ತಾವೇ ನವೀಕರಿಸಿದ್ದರು. ಮರಗಳನ್ನ ಇಳಿಸಿದ್ದರಿಂದ ಸ್ವಲ್ಪ ಭುಜ ನೋವಿದೆ ಅಂತ ಕ್ಲಿನಿಕ್ಗೆ ತೆರಳಿದ್ದೇ ಅವರ ಜೀವಕ್ಕೀಗ ಮುಳುವಾಗಿದೆ. ಭುಜ ನೋವಿಗೆ ಕಾರಣ ಏನು ಎಂದು ವೈದ್ಯರು ಸರಿಯಾಗಿ ಪರಿಶೀಲಿಸದೆ ಎರಡೆರಡು ಇಂಜೆಕ್ಷನ್ ನೀಡಿದ್ದೇ ವಿನೋದ್ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಖಾಸಗಿ ಕ್ಲಿನಿಕ್ ವೈದ್ಯರಾಗಿರೋ ಯಶೋಧರ್ ಪೂಜಾರಿ ವಿರುದ್ಧ ಈ ಹಿಂದೆಯೂ ಹಲವು ದೂರುಗಳಿವೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ವಿನೋದ್ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…