ಕೊಡಗು

ಸುಂಟಿಕೊಪ್ಪ | ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಏನಿದು ಘಟನೆ ?
ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಅವರ ಪುತ್ರ ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲೇ ಇರುವ ಖಾಸಗಿ ಕ್ಲಿನಿಕ್​ಗೆ ತೆರಳಿದ್ದಾರೆ. ಇವರನ್ನು ಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಮಾತ್ರೆ ಜೊತೆಗೆ ಇಂಜೆಕ್ಷನ್​ ಕೂಡ ನೀಡಿದ್ದಾರೆ. ಆದರೂ ನೋವು ಕಡಿಮೆಯಾಗದ ಕಾರಣ ಮತ್ತೊಂದು ಇಂಜೆಕ್ಷನ್​ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕ್ಲಿನಿಕ್​ನಿಂದ ಮನೆಗೆ ಆಗಮಿಸಿದ ವಿನೋದ್ ಕೆಲವೇ ಹೊತ್ತಿನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ಕರೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿನೋದ್ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:-ಮತ್ತೆ ಕೆಂಪಾದ JNU : ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು

ಮೃತ ವಿನೋದ್​ಗೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಕಳೆದ ಕೆಲವು ದಿನಗಳಿಂದ ತಮ್ಮ ಮನೆಯನ್ನ ತಾವೇ ನವೀಕರಿಸಿದ್ದರು. ಮರಗಳನ್ನ ಇಳಿಸಿದ್ದರಿಂದ ಸ್ವಲ್ಪ ಭುಜ ನೋವಿದೆ ಅಂತ ಕ್ಲಿನಿಕ್​ಗೆ ತೆರಳಿದ್ದೇ ಅವರ ಜೀವಕ್ಕೀಗ ಮುಳುವಾಗಿದೆ. ಭುಜ ನೋವಿಗೆ ಕಾರಣ ಏನು ಎಂದು ವೈದ್ಯರು ಸರಿಯಾಗಿ ಪರಿಶೀಲಿಸದೆ ಎರಡೆರಡು ಇಂಜೆಕ್ಷನ್ ನೀಡಿದ್ದೇ ವಿನೋದ್​ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಖಾಸಗಿ ಕ್ಲಿನಿಕ್​ ವೈದ್ಯರಾಗಿರೋ ಯಶೋಧರ್ ಪೂಜಾರಿ ವಿರುದ್ಧ ಈ ಹಿಂದೆಯೂ ಹಲವು ದೂರುಗಳಿವೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ವಿನೋದ್ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

8 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

9 hours ago