ಕೊಡಗು

ಸುಂಟಿಕೊಪ್ಪ | ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಏನಿದು ಘಟನೆ ?
ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಅವರ ಪುತ್ರ ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲೇ ಇರುವ ಖಾಸಗಿ ಕ್ಲಿನಿಕ್​ಗೆ ತೆರಳಿದ್ದಾರೆ. ಇವರನ್ನು ಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಮಾತ್ರೆ ಜೊತೆಗೆ ಇಂಜೆಕ್ಷನ್​ ಕೂಡ ನೀಡಿದ್ದಾರೆ. ಆದರೂ ನೋವು ಕಡಿಮೆಯಾಗದ ಕಾರಣ ಮತ್ತೊಂದು ಇಂಜೆಕ್ಷನ್​ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕ್ಲಿನಿಕ್​ನಿಂದ ಮನೆಗೆ ಆಗಮಿಸಿದ ವಿನೋದ್ ಕೆಲವೇ ಹೊತ್ತಿನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ಕರೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿನೋದ್ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:-ಮತ್ತೆ ಕೆಂಪಾದ JNU : ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಡ ಒಕ್ಕೂಟಕ್ಕೆ ಭರ್ಜರಿ ಗೆಲುವು

ಮೃತ ವಿನೋದ್​ಗೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಕಳೆದ ಕೆಲವು ದಿನಗಳಿಂದ ತಮ್ಮ ಮನೆಯನ್ನ ತಾವೇ ನವೀಕರಿಸಿದ್ದರು. ಮರಗಳನ್ನ ಇಳಿಸಿದ್ದರಿಂದ ಸ್ವಲ್ಪ ಭುಜ ನೋವಿದೆ ಅಂತ ಕ್ಲಿನಿಕ್​ಗೆ ತೆರಳಿದ್ದೇ ಅವರ ಜೀವಕ್ಕೀಗ ಮುಳುವಾಗಿದೆ. ಭುಜ ನೋವಿಗೆ ಕಾರಣ ಏನು ಎಂದು ವೈದ್ಯರು ಸರಿಯಾಗಿ ಪರಿಶೀಲಿಸದೆ ಎರಡೆರಡು ಇಂಜೆಕ್ಷನ್ ನೀಡಿದ್ದೇ ವಿನೋದ್​ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಖಾಸಗಿ ಕ್ಲಿನಿಕ್​ ವೈದ್ಯರಾಗಿರೋ ಯಶೋಧರ್ ಪೂಜಾರಿ ವಿರುದ್ಧ ಈ ಹಿಂದೆಯೂ ಹಲವು ದೂರುಗಳಿವೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ವಿನೋದ್ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

20 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

44 mins ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

1 hour ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

2 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago