ಕೊಡಗು

ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ ಎಂದು ಮೈಮರೆಯುವುದು ಬೇಡ: ಬಿ.ವೈ ವಿಜಯೇಂದ್ರ

ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು.

ನಗರದ ಕ್ರಿಸ್ಟಲ್‌ಕೋರ್ಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್‌ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ, ಅವರು ಎಲ್ಲಾ ವರ್ಗದ ಜನಾಂಗದವರನ್ನು ಜೊತೆಯಲ್ಲಿ ಕೊಂಡ್ಯಯುವವರು ಎಂದರು.

ರಾಜ್ಯದಲ್ಲಿ ಬರಗಾಲವಿದ್ದರೂ ಜನರಿಗೆ ನೆರವು ನೀಡದ ಸರ್ಕಾರ ಅಧಿಕಾರದಲ್ಲಿದೆ. ನಮ್ಮೆಲ್ಲರ ತಪ್ಪಿನಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ, ಪರಿಸ್ಥಿತಿ ಹೇಗೆ ಬದಲಾಗಿದೆ ಎಂದರೆ ರಾಜ್ಯ ವಿಧಾನಸಭೆಗೆ ಯಾವುದೇ ಕ್ಷಣದಲ್ಲೂ ಚುನಾವಣೆ ನಡೆದರೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಯೋಗಿ ಆದಿತ್ಯನಾಥ ಅವರು ಮಡಿಕೇರಿ ಭಾಗದಲ್ಲಿ ಹಾಗೂ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.

ನನಗೆ ತೋರಿದ ಪ್ರೀತಿ, ವಿಶ್ವಾಸ ಯದುವೀರ್‌ಗೂ ತೋರಿ: ಸಂಸದ ಪ್ರತಾಪ್‌ ಸಿಂಹ

ಈ ಹತ್ತು ವರ್ಷ ಕೊಡಗಿನ ಜನ ನನಗೆ ತೋರಿದ ಪ್ರೀತಿ, ವಿಶ್ವಾಸವನ್ನು ಯದುವೀರ್‌ ಅವರಿಗೂ ತೋರಬೇಕು ಎಂದರು. ಗೆಲುವಿನ ಅಂತರ ಒಂದು ಲಕ್ಷಕ್ಕೆ ಒಂದು ಮತವೂ ಕಡಿಮೆಯಾಗದಂತಹ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು.

ಸಂಸದರಾಗಿದ್ದ ಸಮಯದಲ್ಲಿ ತಾವು ಮಾಡಿದ ಅಭಿವೃದ್ಧ ಕೆಲಸಗಳನ್ನು ತಿಳಿಸಿದರು. ಜೊತೆಗೆ ನಾನು ಆರಂಭಿಸಿರುವ ಕೆಲಸ ನಿಲ್ಲದೇ ಅದನ್ನು ಯದುವೀರ್‌ ಮುಂದುವರಿಸುತ್ತಾರೆ ಎಂದು ಹೇಳಿದರು. ನಾನು ಸಂಸದನಾಗದೇ ಹೋದರೂ ಕ್ಷೇತ್ರ ಪುನರ್‌ ವಿಂಗಡಣೆ ವೇಳೆ ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರಕ್ಕೆ ಒತ್ತಾಯಿಸುವೆ ಎಂದು ಪುನರುಚ್ಚರಿಸಿದರು.

ಮೈಸೂರು ಅಭಿವೃದ್ಧಿಯಲ್ಲಿ ಪ್ರತಾಪಸಿಂಹ ಹೆಸರು ಶಾಶ್ವತ: ಯದುವೀರ್‌

ಮೈಸೂರು ಕೊಡಗು ಅಭಿವೃದ್ಧಿಯಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಹೆಸರು ಶಾಶ್ವತವಾಗಿ ಉಳಿಯಲಿದೆ. ಮುಂದೆ ಅವರ ಸಲಹೆ ಸಹಕಾರ ಪಡೆಯುವೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಿಳಿಸಿದರು.

ಕೊಡಗಿನ ಜನತೆಗೆ ಮೈಸೂರು ದಸರ ಹಾಗೂ ಅರಮನೆಗೆ ಸ್ವಾಗತ. ಮಡಿಕೇರಿ ಮತ್ತು ಮೈಸೂರಿನಲ್ಲಿ ಸಂಸದರ ಕಚೇರಿ ಇರುತ್ತದೆ. ಜೊತೆಗೆ ಇದು ಕಾರ್ಯಕರ್ತರ ಕಚೇರಿಯು ಆಗಿರುತ್ತದೆ. ತಮ್ಮ ಕೆಲಸ ಕಾರ್ಯಗಳಿಗೆ ಇದು ಸಹಕಾರಯಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಸ್.ಎ ರಾಮದಾಸ್‌, ಕೆ.ಜಿ ಬೋಪಯ್ಯ, ಎಂ.ಪಿ ಅಪ್ಪಚ್ಚುರಂಜನ್‌, ಸುಜಾ ಕುಶಾಲಪ್ಪ, ಮೇದಪ್ಪ, ಸುನೀಲ್‌ ಸುಬ್ರಹ್ಮಣ್ಯ, ರಾಬಿನ್‌ ದೇವಯ್ಯ, ಉದಯ್‌ಕುಮಾರ್‌ ಶೆಟ್ಟಿ, ರೀನಾ ಪ್ರಕಾಶ್‌ ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

4 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

4 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

5 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

6 hours ago