ಕೊಡಗು

ಜೀವನ ಪದ್ಧತಿಯಾಗಿರುವ ಜಾನಪದದ ಉಳಿವು ಅಗತ್ಯ: ವೆಂಕಟ್ ರಾಜಾ ಅಭಿಮತ

ಮಡಿಕೇರಿ: ಜೀವನ ಪದ್ಧತಿಯಂತೆ ನಮ್ಮೊಳಗೆ ಹಾಸುಹೊಕ್ಕಾಗಿರುವ ಜಾನಪದ ಸಂಸ್ಕೃತಿ, ಕಲೆ, ಸಾಹಿತ್ಯಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ನಡೆದ ‘ಜಾನಪದ ವೈವಿಧ್ಯ ಕಾರ್ಯಕ್ರಮ’ದಲ್ಲಿ ದುಡಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಾನಪದ ಕಲೆ, ಸಾಹಿತ್ಯ ದಿನದಿಂದ ದಿನಕ್ಕೆ ಮರೆಯಾಗುತ್ತಿದೆ. ಈ ಬಗ್ಗೆ ಗಂಭೀರ ಚಿಂತನೆ ಅಗತ್ಯವಾಗಿದೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತವಾಗಿದ್ದು, ಎಲ್ಲಾ ಮಾದರಿಯ ಜಾನಪದ ಕಲೆಗಳನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಾನಪದ ಪರಿಷತ್ ಕೇವಲ ಪಟ್ಟಣಕ್ಕೆ ಮಾತ್ರ ಸೀಮಿತವಾಗದೇ ಗ್ರಾಮೀಣ ಭಾಗದಲ್ಲೂ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ. ಜಾನಪದ ಉತ್ಸವಗಳು ಹೆಚ್ಚು ಹೆಚ್ಚು ನಡೆಯಬೇಕು. ಜಾನಪದ ಪರಿಷತ್ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು.

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಮಾತನಾಡಿ, ಜಾನಪದ ಜೀವನ ಪದ್ಧತಿ ಮನಸ್ಸನ್ನು ಪುಳಕಿತಗೊಳಿಸುತ್ತದೆ. ಜಾನಪದ ಅಗಾಧವಾಗಿದೆ. ಗ್ರಂಥಗಳಲ್ಲಿ ಅದು ಉಳಿದುಕೊಂಡಿಲ್ಲ. ಬಾಯಿಂದ ಬಾಯಿಗೆ ವರ್ಗವಾಗಿರುವ ಸಾಹಿತ್ಯವನ್ನು ಉಳಿಸಿ ಬೆಳೆಸಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಜಾನಪದೀಯರಲ್ಲಿ ಯಾವುದೇ ಭೇಧ ಭಾವವಿಲ್ಲ. ಸಹಜ ಪ್ರೀತಿಯಿಂದ ಬೆಳೆದು ಬಂದವರು. ಇಂದಿನ ದಿನಮಾನದಲ್ಲಿ ಎಲ್ಲವೂ ಭಿನ್ನವಾಗಿದೆ. ಒಗ್ಗಟ್ಟು ಮರೆಯಾಗಿದೆ. ಈ ನಿಟ್ಟಿನಲ್ಲಿ ಜಾನಪದೀಯ ಮನಸ್ಸುಗಳನ್ನು ಜೋಡಿಸುವ ಕೆಲಸವನ್ನು ಪರಿಷತ್ ಮಾಡುತ್ತಿದೆ ಎಂದರು.

ಉತ್ತಮ ಹಾಗೂ ನೆಮ್ಮದಿಯ ಸಮಾಜ ನಿರ್ಮಾಣಕ್ಕೆ ಜಾನಪದ ಸಹಕಾರಿ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಜಾನಪದವನ್ನು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗ ತಾಂತ್ರಿಕ ಬದುಕಿನಲ್ಲಿ ಕಳೆದುಹೋಗಬಾರದು ಎಂದರು.

ಪ್ರಾಸ್ತಾವಿಕವಾಗಿ ಜಾನಪದ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಕೂಡಿ ಬಾಳುವ ಸಂತೋಷವನ್ನು ಉಳಿಸಿಕೊಂಡು ಬಂದವರೇ ಜಾನಪದರು. ಜಾನಪದರು ಎಂದಿಗೂ ಪ್ರಚಾರ ಮತ್ತು ಪ್ರಸಿದ್ಧಿಗೆ ಒಳಪಟ್ಟವರಲ್ಲ. ತಾಂತ್ರಿಕತೆ ಹೆಚ್ಚಾದಂತೆ ಜಾನಪದ ಮರೆಯಾಗುತ್ತಿದೆ. ವಿದ್ಯಾರ್ಥಿಗಳು ಜಾನಪದದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಜಾನಪದ ಪರಿಷತ್‍ನ ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಖಜಾಂಚಿ ಸಂಪತ್ ಕುಮಾರ್, ಕಾರ್ಯದರ್ಶಿ ಉಜ್ವಲ್ ರಂಜಿತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್, ಸರ್ಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ವಿಜಯ್ ಉಪಸ್ಥಿತರಿದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದಿಂದ ಸಾಂಸ್ಕೃತಿಕ ನೃತ್ಯ ನಡೆಯಿತು. ಮಡಿಕೇರಿಯ ಸಪ್ತಸ್ವರ ಕಲಾವಿದರ ಬಳಗದಿಂದ ಜಾನಪದ ಗೀತೆ ಗಾಯನ, ಶನಿವಾರಸಂತೆಯ ಜಾನಪದ ಕಲಾವಿದ ಮೊಗೇರ ಸುರೇಶ್ ಅವರಿಂದ ಜಾನಪದ ಗೀತ ಗಾಯನ, ಕಾಶಿ ಅಚ್ಚಯ್ಯ ಅವರಿಂದ ದುಡಿಪಾಟ್, ವೀರಾಜಪೇಟೆಯ ಕಲಾವಿದ ಸಾದಿಕ್ ಹಂಸ ತಂಡದ ಕುಂಚಗಾಯನ ನೆರೆದಿದ್ದವರನ್ನು ರಂಜಿಸಿತು.

ಮೊಗೇರ ಸುರೇಶ್ ಹಾಗೂ ಸಾದಿಕ್ ಹಂಸ ಇವರುಗಳನ್ನು ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಜಾನಪದ ಪರಿಕರಗಳ ಪ್ರದರ್ಶನ ಗಮನ ಸೆಳೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

5 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

6 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

6 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

7 hours ago