ಕೊಡಗು

ಮಾನವ-ಪ್ರಾಣಿ ಸಂಘರ್ಷಕ್ಕೆ ವೈಜ್ಞಾನಿಕ ಕ್ರಮ ವಹಿಸಿ : ಶಾಸಕ ಮಂತರ್‌ಗೌಡ ಸಲಹೆ

ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.

ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.

ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.

ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈಗಾಗಲೇ ರಚಿಸಿರುವ ] ಇಟಿಎಫ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ತಂಡಗಳನ್ನು ಒಟ್ಟುಗೂಡಿಸಿ ಮಾನವ ವನ್ಯಜೀವಿ ಸಂಘರ್ಷ ಉಪ ತಂಡಗಳಾಗಿ ರಚಿಸಿ ಆಯ್ತ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಶಾಸಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago