ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.
ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.
ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.
ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.
ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈಗಾಗಲೇ ರಚಿಸಿರುವ ] ಇಟಿಎಫ್ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ತಂಡಗಳನ್ನು ಒಟ್ಟುಗೂಡಿಸಿ ಮಾನವ ವನ್ಯಜೀವಿ ಸಂಘರ್ಷ ಉಪ ತಂಡಗಳಾಗಿ ರಚಿಸಿ ಆಯ್ತ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಶಾಸಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…