virajpete murder case
ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು
ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ, ನೇಣಿನ ಕುಣಿಕೆಯಿಂದ ಬಿಡಿಸಿ ಸ್ವತಃ ಪತಿ ನಜೀರ್ ಸಫ್ರೀನಾಳನ್ನು ನಾಪೋಕ್ಲು ವಿನ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದುಮೃತ ಸಫ್ರೀನ ದೇಹದಲ್ಲಿ ಗಾಯಗಳ ಗುರುತು ಇದ್ದು ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ. ಎಂದು ಸಫ್ರೀನ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಫ್ರೀನ ಸಹೋದರ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…