virajpete murder case
ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು
ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ, ನೇಣಿನ ಕುಣಿಕೆಯಿಂದ ಬಿಡಿಸಿ ಸ್ವತಃ ಪತಿ ನಜೀರ್ ಸಫ್ರೀನಾಳನ್ನು ನಾಪೋಕ್ಲು ವಿನ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದುಮೃತ ಸಫ್ರೀನ ದೇಹದಲ್ಲಿ ಗಾಯಗಳ ಗುರುತು ಇದ್ದು ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ. ಎಂದು ಸಫ್ರೀನ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಫ್ರೀನ ಸಹೋದರ ರುವೈಸ್ ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…