ಕೊಡಗು

ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌

ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ.

ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ.

ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯೊ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ.

ಅಕ್ಟೋಬರ್‌ಗೆ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದ್ದು, ಕಾವೇರಿ ತೀರ್ಥೋದ್ಬವಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಾರ್ವಜನಿಕರು ಆಗಮಿಸಲಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

1 hour ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

1 hour ago

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…

2 hours ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

2 hours ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

3 hours ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

3 hours ago