ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ.
ವಿರಾಜಪೇಟೆ ನಗರದ ತೆಲುಗರ ಬೀದಿಯ ಶ್ರೀ ಮಧುರೈ ವೀರನ್ ಸ್ವಾಮಿ ದೇಗಲದ ಆವರಣದಲ್ಲಿರುವ ಕಟ್ಟಡದ ಮೇಲೆ ಸನೀಹದ ಸ್ಥಳದಲ್ಲಿದ್ದ ಒಣಗಿದ ಬೀಟಿ ಮರ ಒಂದು ಬಿದ್ದು ಹಾನಿಯಾಗಿದೆ.
ಫೆಬ್ರವರಿ.25ರ ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಒಂದೇ ಸಮನೆ ಮಳೆಯು ಸುರಿದಿದೆ. ಈ ಸಂಧರ್ಭದಲ್ಲಿ ದೇಗುಲದ ಆವರಣಕ್ಕೆ ಹೊಂದಿಕೊಂಡಿರುವ ಸ್ಥಳದಲ್ಲಿ ಬಹುಕಾಲದಿಂದ ಒಣಗಿ ನಿಂತ ಬೀಟಿ ಮರೊಂದಿತ್ತು. ಮಳೆಯ ಕಾರಣ ಮಣ್ಣು ಸಡಿಲಗೊಂಡು ದೇಗುಲ ಆವರಣದ ಕಟ್ಟಡ ಮೇಲೆ ಬಿದ್ದು ಕಟ್ಟಡ ದ ಮೇಲ್ಚಾವಣಿ ಸೇರಿದಂತೆ ತಡೆಗೋಡೆ ಹಾನಿಯಾಗಿದೆ.
ದೇಗುಲದ ಆಡಳಿತ ಮಂಡಳಿ ಮರಬಿದ್ದು ಹಾನಿಯಾಗಿರುವ ಕಟ್ಟಡಕ್ಕೆ ಪರಿಹಾರ ಮತ್ತು ಮರವನ್ನು ತೆರವುಗೊಳಿಸುವಂತೆ ಕೋರಿ ಸಂಭಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…