ಕೊಡಗು

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ.

ವಿರಾಜಪೇಟೆ ನಗರದ ತೆಲುಗರ ಬೀದಿಯ ಶ್ರೀ ಮಧುರೈ ವೀರನ್ ಸ್ವಾಮಿ ದೇಗಲದ ಆವರಣದಲ್ಲಿರುವ ಕಟ್ಟಡದ ಮೇಲೆ ಸನೀಹದ ಸ್ಥಳದಲ್ಲಿದ್ದ ಒಣಗಿದ ಬೀಟಿ ಮರ ಒಂದು ಬಿದ್ದು ಹಾನಿಯಾಗಿದೆ.

ಫೆಬ್ರವರಿ.25ರ ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಒಂದೇ ಸಮನೆ ಮಳೆಯು ಸುರಿದಿದೆ. ಈ ಸಂಧರ್ಭದಲ್ಲಿ ದೇಗುಲದ ಆವರಣಕ್ಕೆ ಹೊಂದಿಕೊಂಡಿರುವ ಸ್ಥಳದಲ್ಲಿ ಬಹುಕಾಲದಿಂದ ಒಣಗಿ ನಿಂತ ಬೀಟಿ ಮರೊಂದಿತ್ತು. ಮಳೆಯ ಕಾರಣ ಮಣ್ಣು ಸಡಿಲಗೊಂಡು ದೇಗುಲ ಆವರಣದ ಕಟ್ಟಡ ಮೇಲೆ ಬಿದ್ದು ಕಟ್ಟಡ ದ ಮೇಲ್ಚಾವಣಿ ಸೇರಿದಂತೆ ತಡೆಗೋಡೆ ಹಾನಿಯಾಗಿದೆ.

ದೇಗುಲದ ಆಡಳಿತ ಮಂಡಳಿ ಮರಬಿದ್ದು ಹಾನಿಯಾಗಿರುವ ಕಟ್ಟಡಕ್ಕೆ ಪರಿಹಾರ ಮತ್ತು ಮರವನ್ನು ತೆರವುಗೊಳಿಸುವಂತೆ ಕೋರಿ ಸಂಭಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

7 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

7 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

7 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

8 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

8 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

16 hours ago