ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ.
ವಿರಾಜಪೇಟೆ ನಗರದ ತೆಲುಗರ ಬೀದಿಯ ಶ್ರೀ ಮಧುರೈ ವೀರನ್ ಸ್ವಾಮಿ ದೇಗಲದ ಆವರಣದಲ್ಲಿರುವ ಕಟ್ಟಡದ ಮೇಲೆ ಸನೀಹದ ಸ್ಥಳದಲ್ಲಿದ್ದ ಒಣಗಿದ ಬೀಟಿ ಮರ ಒಂದು ಬಿದ್ದು ಹಾನಿಯಾಗಿದೆ.
ಫೆಬ್ರವರಿ.25ರ ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಒಂದೇ ಸಮನೆ ಮಳೆಯು ಸುರಿದಿದೆ. ಈ ಸಂಧರ್ಭದಲ್ಲಿ ದೇಗುಲದ ಆವರಣಕ್ಕೆ ಹೊಂದಿಕೊಂಡಿರುವ ಸ್ಥಳದಲ್ಲಿ ಬಹುಕಾಲದಿಂದ ಒಣಗಿ ನಿಂತ ಬೀಟಿ ಮರೊಂದಿತ್ತು. ಮಳೆಯ ಕಾರಣ ಮಣ್ಣು ಸಡಿಲಗೊಂಡು ದೇಗುಲ ಆವರಣದ ಕಟ್ಟಡ ಮೇಲೆ ಬಿದ್ದು ಕಟ್ಟಡ ದ ಮೇಲ್ಚಾವಣಿ ಸೇರಿದಂತೆ ತಡೆಗೋಡೆ ಹಾನಿಯಾಗಿದೆ.
ದೇಗುಲದ ಆಡಳಿತ ಮಂಡಳಿ ಮರಬಿದ್ದು ಹಾನಿಯಾಗಿರುವ ಕಟ್ಟಡಕ್ಕೆ ಪರಿಹಾರ ಮತ್ತು ಮರವನ್ನು ತೆರವುಗೊಳಿಸುವಂತೆ ಕೋರಿ ಸಂಭಂಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…