ಕೊಡಗು

ಮಂಜಿನ ನಗರಿಯಲ್ಲಿ ಚಂದನ್ ಶೆಟ್ಟಿ ಹಾಡಿನ ಮೋಡಿ..!

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು.

ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ ಪ್ರೇಕ್ಷಕರು ಸ್ವಾಗತಿಸಿದರು. ಚಂದನ್ ತಮ್ಮ ಎಂದಿನ ಶೈಲಿಯಲ್ಲಿ ಹಾಡಲು ಆರಂಭಿಸುತ್ತಿದ್ದಂತೆ ಯುವಜನತೆ ಹುಚ್ಚೆದ್ದು ಕುಣಿದು ಸಂಭ್ರಮಿಸಿದರು. ಚಂದನ್ ಜೊತೆ ತಾವೂ ಹಾಡು ಹಾಡಿದರಲ್ಲದೆ, ನಿಂತ ಸ್ಥಳಗಳಲ್ಲಿಯೇ ನಲಿದು ಸಂಭ್ರಮಿಸಿದರು. ಯುವತಿಯರೂ ಚಂದನ್ ಹಾಡಿಗೆ ಕುಣಿದು ಕುಪ್ಪಳಿಸಿದರು.

ಇದೇ ಸಂದರ್ಭ ನಡೆದ ನೃತ್ಯ ಸ್ಪರ್ಧೆ ಕೂಡ ಗಮನಸೆಳೆಯಿತು. ಜಿಲ್ಲೆಯ ವಿವಿಧೆಡೆಯ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರೇಕ್ಷಕರನ್ನು ರಂಜಿಸಿದರು.

ಇದೇ ಸಂದರ್ಭ ತಮ್ಮ ಹಾಡಿನ ನಡುವೆ ಯುವಸಮೂಹದ ಬಳಿ ಹಾಡನ್ನು ಹಾಡಿಸುವ ಪ್ರಯತ್ನವನ್ನು ಚಂದನ್‌ಶೆಟ್ಟಿ ಮಾಡಿದರು. ಪ್ರೇಕ್ಷಕರು ಹಾಡಿದ ಹಾಡನ್ನು ಕೇಳಿ ಖುದ್ದು ಚಂದನ್ ಶೆಟ್ಟಿಯೇ ಅಚ್ಚರಿಗೊಳಗಾದರು. ಪರೀಕ್ಷೆಗಳಲ್ಲಿ ಎಷ್ಟು ಅಂಕ ಬಂದಿದೆ? ಈ ಹಾಡನ್ನು ಉತ್ತರ ಪತ್ರಿಕೆಯಲ್ಲಿ ಬರೆಯಬೇಡಿ ಎಂದು ಹಾಸ್ಯಚಟಾಕಿ ಹಾರಿಸಿ ಪ್ರೇಕ್ಷಕರನ್ನು ನಗೆಕಡಲಿನಲ್ಲಿ ತೇಲಿಸಿದರು. ಒಟ್ಟಾರೆ ಸುಮಾರು 20 ನಿಮಿಷದ ಚಂದನ್‌ಶೆಟ್ಟಿ ಕಾರ್ಯಕ್ರಮವನ್ನು ಯುವ ಸಮೂಹ ಸಂಪೂರ್ಣವಾಗಿ ಎಂಜಾಯ್ ಮಾಡಿದರು.

lokesh

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

53 mins ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

1 hour ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

1 hour ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago