ಕೊಡಗು

ಮಂಜಿನ ನಗರಿಯಲ್ಲಿ ಚಂದನ್ ಶೆಟ್ಟಿ ಹಾಡಿನ ಮೋಡಿ..!

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು.

ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ ಪ್ರೇಕ್ಷಕರು ಸ್ವಾಗತಿಸಿದರು. ಚಂದನ್ ತಮ್ಮ ಎಂದಿನ ಶೈಲಿಯಲ್ಲಿ ಹಾಡಲು ಆರಂಭಿಸುತ್ತಿದ್ದಂತೆ ಯುವಜನತೆ ಹುಚ್ಚೆದ್ದು ಕುಣಿದು ಸಂಭ್ರಮಿಸಿದರು. ಚಂದನ್ ಜೊತೆ ತಾವೂ ಹಾಡು ಹಾಡಿದರಲ್ಲದೆ, ನಿಂತ ಸ್ಥಳಗಳಲ್ಲಿಯೇ ನಲಿದು ಸಂಭ್ರಮಿಸಿದರು. ಯುವತಿಯರೂ ಚಂದನ್ ಹಾಡಿಗೆ ಕುಣಿದು ಕುಪ್ಪಳಿಸಿದರು.

ಇದೇ ಸಂದರ್ಭ ನಡೆದ ನೃತ್ಯ ಸ್ಪರ್ಧೆ ಕೂಡ ಗಮನಸೆಳೆಯಿತು. ಜಿಲ್ಲೆಯ ವಿವಿಧೆಡೆಯ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರೇಕ್ಷಕರನ್ನು ರಂಜಿಸಿದರು.

ಇದೇ ಸಂದರ್ಭ ತಮ್ಮ ಹಾಡಿನ ನಡುವೆ ಯುವಸಮೂಹದ ಬಳಿ ಹಾಡನ್ನು ಹಾಡಿಸುವ ಪ್ರಯತ್ನವನ್ನು ಚಂದನ್‌ಶೆಟ್ಟಿ ಮಾಡಿದರು. ಪ್ರೇಕ್ಷಕರು ಹಾಡಿದ ಹಾಡನ್ನು ಕೇಳಿ ಖುದ್ದು ಚಂದನ್ ಶೆಟ್ಟಿಯೇ ಅಚ್ಚರಿಗೊಳಗಾದರು. ಪರೀಕ್ಷೆಗಳಲ್ಲಿ ಎಷ್ಟು ಅಂಕ ಬಂದಿದೆ? ಈ ಹಾಡನ್ನು ಉತ್ತರ ಪತ್ರಿಕೆಯಲ್ಲಿ ಬರೆಯಬೇಡಿ ಎಂದು ಹಾಸ್ಯಚಟಾಕಿ ಹಾರಿಸಿ ಪ್ರೇಕ್ಷಕರನ್ನು ನಗೆಕಡಲಿನಲ್ಲಿ ತೇಲಿಸಿದರು. ಒಟ್ಟಾರೆ ಸುಮಾರು 20 ನಿಮಿಷದ ಚಂದನ್‌ಶೆಟ್ಟಿ ಕಾರ್ಯಕ್ರಮವನ್ನು ಯುವ ಸಮೂಹ ಸಂಪೂರ್ಣವಾಗಿ ಎಂಜಾಯ್ ಮಾಡಿದರು.

lokesh

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

7 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

20 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

32 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

47 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago