ಕೊಡಗು

ಮಂಜಿನ ನಗರಿಯಲ್ಲಿ ಚಂದನ್ ಶೆಟ್ಟಿ ಹಾಡಿನ ಮೋಡಿ..!

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು.

ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ ಪ್ರೇಕ್ಷಕರು ಸ್ವಾಗತಿಸಿದರು. ಚಂದನ್ ತಮ್ಮ ಎಂದಿನ ಶೈಲಿಯಲ್ಲಿ ಹಾಡಲು ಆರಂಭಿಸುತ್ತಿದ್ದಂತೆ ಯುವಜನತೆ ಹುಚ್ಚೆದ್ದು ಕುಣಿದು ಸಂಭ್ರಮಿಸಿದರು. ಚಂದನ್ ಜೊತೆ ತಾವೂ ಹಾಡು ಹಾಡಿದರಲ್ಲದೆ, ನಿಂತ ಸ್ಥಳಗಳಲ್ಲಿಯೇ ನಲಿದು ಸಂಭ್ರಮಿಸಿದರು. ಯುವತಿಯರೂ ಚಂದನ್ ಹಾಡಿಗೆ ಕುಣಿದು ಕುಪ್ಪಳಿಸಿದರು.

ಇದೇ ಸಂದರ್ಭ ನಡೆದ ನೃತ್ಯ ಸ್ಪರ್ಧೆ ಕೂಡ ಗಮನಸೆಳೆಯಿತು. ಜಿಲ್ಲೆಯ ವಿವಿಧೆಡೆಯ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರೇಕ್ಷಕರನ್ನು ರಂಜಿಸಿದರು.

ಇದೇ ಸಂದರ್ಭ ತಮ್ಮ ಹಾಡಿನ ನಡುವೆ ಯುವಸಮೂಹದ ಬಳಿ ಹಾಡನ್ನು ಹಾಡಿಸುವ ಪ್ರಯತ್ನವನ್ನು ಚಂದನ್‌ಶೆಟ್ಟಿ ಮಾಡಿದರು. ಪ್ರೇಕ್ಷಕರು ಹಾಡಿದ ಹಾಡನ್ನು ಕೇಳಿ ಖುದ್ದು ಚಂದನ್ ಶೆಟ್ಟಿಯೇ ಅಚ್ಚರಿಗೊಳಗಾದರು. ಪರೀಕ್ಷೆಗಳಲ್ಲಿ ಎಷ್ಟು ಅಂಕ ಬಂದಿದೆ? ಈ ಹಾಡನ್ನು ಉತ್ತರ ಪತ್ರಿಕೆಯಲ್ಲಿ ಬರೆಯಬೇಡಿ ಎಂದು ಹಾಸ್ಯಚಟಾಕಿ ಹಾರಿಸಿ ಪ್ರೇಕ್ಷಕರನ್ನು ನಗೆಕಡಲಿನಲ್ಲಿ ತೇಲಿಸಿದರು. ಒಟ್ಟಾರೆ ಸುಮಾರು 20 ನಿಮಿಷದ ಚಂದನ್‌ಶೆಟ್ಟಿ ಕಾರ್ಯಕ್ರಮವನ್ನು ಯುವ ಸಮೂಹ ಸಂಪೂರ್ಣವಾಗಿ ಎಂಜಾಯ್ ಮಾಡಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago