ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ ಅಂತಿಮ ದರ್ಶನ ಪಡೆದರು.
ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಸ್ಥಳೀಯ ಶಾಸಕರ ವೈಫಲ್ಯ ಎತ್ತಿ ಹಿಡಿದಿದ್ದೇ ತಪ್ಪಾ..?.ಆ ಕಾರಣಕ್ಕೆ ಕೇಸು ಹಾಕಿಸಿ ಹಿಂಸೆ ನೀಡಲಾಗಿದೆ. ಹೈಕೋರ್ಟ್ನಲ್ಲಿ ಬೇಲ್ ಆದ್ರೂ ಮನೆಗೆ ಪೊಲೀಸರನ್ನು ಯಾಕೆ ಕಳುಹಿಸಿದ್ದಾರೆ. ಎಫ್ಐಆರ್ನಲ್ಲಿ ಶಾಸಕರ ಹೆಸರು ಉಲ್ಲೇಖಿಸದಿರುವುದು ಅಕ್ಷಮ್ಯ ಅಪರಾಧ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರು, ಮಂತರ್ ಗೌಡ ಪ್ರಭಾವಿ ಶಾಸಕರಿದ್ದಾರೆ.
ಇಬ್ಬರು ಶಾಸಕರ ದಬ್ಬಾಳಿಕೆಯಿಂದ ನಮ್ಮ ಕಾರ್ಯಕರ್ತನ ಆತ್ಮಹತ್ಯೆ ಆಗಿದೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್ ಕಾಂಗ್ರೆಸ್ ಆಫೀಸ್ ತರ ಕೆಲಸ ಮಾಡ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ. ಬೆಂಗಳೂರಿನ ಎಫ್ಐಆರ್ನಲ್ಲಿ ಶಾಸಕರ ಹೆಸರು ಬಿಟ್ಟಿದ್ದಾರೆ. ಇದನ್ನ ಗೃಹ ಸಚಿವರು ಗಮನಿಸಬೇಕು. ಮುಂದೆ ಏನಾದರೂ ಹೆಚ್ಚು ಕಡಿಮೆ ಆದರೆ ನಾವು ಜವಾಬ್ದಾರರಲ್ಲ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಹಿಂದೆ ಆತ್ಮಹತ್ಯೆ ಪ್ರಕರಣಗಳು ಏನಾಗಿದೆ ಅನ್ನೋದು ರಾಜ್ಯದ ಜನರ ಗಮನದಲ್ಲಿದೆ.
ಕಾಂಗ್ರೆಸ್ ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಸುತ್ತಿದೆ. ಇದನ್ನು ನೋಡಿ ಕಣ್ಣುಮುಚ್ಚಿ ಕೂರುವ ಪ್ರಶ್ನೆಯೇ ಇಲ್ಲ. ಎಫ್ಐಆರ್ನಲ್ಲಿ ಶಾಸಕರ ಹೆಸರು ಉಲ್ಲೇಖವಾಗುವವರೆಗೆ ಅಂತ್ಯಸಂಸ್ಕಾರ ಮಾಡಲ್ಲ. ಅರ್ಧ ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಪೊಲೀಸರಿಗೆ ಒಂದು ಗಂಟೆಗಳ ಗಡುವು ನೀಡಿದರು.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…