ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ ಅಂತಿಮ ದರ್ಶನ ಪಡೆದರು.
ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಸ್ಥಳೀಯ ಶಾಸಕರ ವೈಫಲ್ಯ ಎತ್ತಿ ಹಿಡಿದಿದ್ದೇ ತಪ್ಪಾ..?.ಆ ಕಾರಣಕ್ಕೆ ಕೇಸು ಹಾಕಿಸಿ ಹಿಂಸೆ ನೀಡಲಾಗಿದೆ. ಹೈಕೋರ್ಟ್ನಲ್ಲಿ ಬೇಲ್ ಆದ್ರೂ ಮನೆಗೆ ಪೊಲೀಸರನ್ನು ಯಾಕೆ ಕಳುಹಿಸಿದ್ದಾರೆ. ಎಫ್ಐಆರ್ನಲ್ಲಿ ಶಾಸಕರ ಹೆಸರು ಉಲ್ಲೇಖಿಸದಿರುವುದು ಅಕ್ಷಮ್ಯ ಅಪರಾಧ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರು, ಮಂತರ್ ಗೌಡ ಪ್ರಭಾವಿ ಶಾಸಕರಿದ್ದಾರೆ.
ಇಬ್ಬರು ಶಾಸಕರ ದಬ್ಬಾಳಿಕೆಯಿಂದ ನಮ್ಮ ಕಾರ್ಯಕರ್ತನ ಆತ್ಮಹತ್ಯೆ ಆಗಿದೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್ ಕಾಂಗ್ರೆಸ್ ಆಫೀಸ್ ತರ ಕೆಲಸ ಮಾಡ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ. ಬೆಂಗಳೂರಿನ ಎಫ್ಐಆರ್ನಲ್ಲಿ ಶಾಸಕರ ಹೆಸರು ಬಿಟ್ಟಿದ್ದಾರೆ. ಇದನ್ನ ಗೃಹ ಸಚಿವರು ಗಮನಿಸಬೇಕು. ಮುಂದೆ ಏನಾದರೂ ಹೆಚ್ಚು ಕಡಿಮೆ ಆದರೆ ನಾವು ಜವಾಬ್ದಾರರಲ್ಲ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಹಿಂದೆ ಆತ್ಮಹತ್ಯೆ ಪ್ರಕರಣಗಳು ಏನಾಗಿದೆ ಅನ್ನೋದು ರಾಜ್ಯದ ಜನರ ಗಮನದಲ್ಲಿದೆ.
ಕಾಂಗ್ರೆಸ್ ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಸುತ್ತಿದೆ. ಇದನ್ನು ನೋಡಿ ಕಣ್ಣುಮುಚ್ಚಿ ಕೂರುವ ಪ್ರಶ್ನೆಯೇ ಇಲ್ಲ. ಎಫ್ಐಆರ್ನಲ್ಲಿ ಶಾಸಕರ ಹೆಸರು ಉಲ್ಲೇಖವಾಗುವವರೆಗೆ ಅಂತ್ಯಸಂಸ್ಕಾರ ಮಾಡಲ್ಲ. ಅರ್ಧ ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಪೊಲೀಸರಿಗೆ ಒಂದು ಗಂಟೆಗಳ ಗಡುವು ನೀಡಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…