ಕೊಡಗು

ರಾಜ್ಯದಲ್ಲಿ ಕಾಂಗ್ರೆಸ್‌ ತುಘಲಕ್‌ ಸರ್ಕಾರ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ ಅಂತಿಮ ದರ್ಶನ ಪಡೆದರು.

ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಸ್ಥಳೀಯ ಶಾಸಕರ ವೈಫಲ್ಯ ಎತ್ತಿ ಹಿಡಿದಿದ್ದೇ ತಪ್ಪಾ..?.ಆ ಕಾರಣಕ್ಕೆ ಕೇಸು ಹಾಕಿಸಿ ಹಿಂಸೆ ನೀಡಲಾಗಿದೆ. ಹೈಕೋರ್ಟ್‌ನಲ್ಲಿ ಬೇಲ್ ಆದ್ರೂ ಮನೆಗೆ ಪೊಲೀಸರನ್ನು ಯಾಕೆ ಕಳುಹಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಉಲ್ಲೇಖಿಸದಿರುವುದು ಅಕ್ಷಮ್ಯ ಅಪರಾಧ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರು, ಮಂತರ್ ಗೌಡ ಪ್ರಭಾವಿ ಶಾಸಕರಿದ್ದಾರೆ.

ಇಬ್ಬರು ಶಾಸಕರ ದಬ್ಬಾಳಿಕೆಯಿಂದ ನಮ್ಮ ಕಾರ್ಯಕರ್ತನ ಆತ್ಮಹತ್ಯೆ ಆಗಿದೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್ ಕಾಂಗ್ರೆಸ್ ಆಫೀಸ್ ತರ ಕೆಲಸ ಮಾಡ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ. ಬೆಂಗಳೂರಿನ ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಬಿಟ್ಟಿದ್ದಾರೆ. ಇದನ್ನ ಗೃಹ ಸಚಿವರು ಗಮನಿಸಬೇಕು. ಮುಂದೆ ಏನಾದರೂ ಹೆಚ್ಚು ಕಡಿಮೆ‌ ಆದರೆ ನಾವು ಜವಾಬ್ದಾರರಲ್ಲ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಹಿಂದೆ ಆತ್ಮಹತ್ಯೆ ಪ್ರಕರಣಗಳು‌ ಏನಾಗಿದೆ ಅನ್ನೋದು ರಾಜ್ಯದ ಜನರ ಗಮನದಲ್ಲಿದೆ.

ಕಾಂಗ್ರೆಸ್ ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಸುತ್ತಿದೆ. ಇದನ್ನು ನೋಡಿ ಕಣ್ಣುಮುಚ್ಚಿ ಕೂರುವ ಪ್ರಶ್ನೆಯೇ ಇಲ್ಲ. ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಉಲ್ಲೇಖವಾಗುವವರೆಗೆ ಅಂತ್ಯಸಂಸ್ಕಾರ ಮಾಡಲ್ಲ. ಅರ್ಧ ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಪೊಲೀಸರಿಗೆ ಒಂದು ಗಂಟೆಗಳ‌ ಗಡುವು ನೀಡಿದರು.

 

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago