ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ ಅಂತಿಮ ದರ್ಶನ ಪಡೆದರು.
ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಸ್ಥಳೀಯ ಶಾಸಕರ ವೈಫಲ್ಯ ಎತ್ತಿ ಹಿಡಿದಿದ್ದೇ ತಪ್ಪಾ..?.ಆ ಕಾರಣಕ್ಕೆ ಕೇಸು ಹಾಕಿಸಿ ಹಿಂಸೆ ನೀಡಲಾಗಿದೆ. ಹೈಕೋರ್ಟ್ನಲ್ಲಿ ಬೇಲ್ ಆದ್ರೂ ಮನೆಗೆ ಪೊಲೀಸರನ್ನು ಯಾಕೆ ಕಳುಹಿಸಿದ್ದಾರೆ. ಎಫ್ಐಆರ್ನಲ್ಲಿ ಶಾಸಕರ ಹೆಸರು ಉಲ್ಲೇಖಿಸದಿರುವುದು ಅಕ್ಷಮ್ಯ ಅಪರಾಧ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರು, ಮಂತರ್ ಗೌಡ ಪ್ರಭಾವಿ ಶಾಸಕರಿದ್ದಾರೆ.
ಇಬ್ಬರು ಶಾಸಕರ ದಬ್ಬಾಳಿಕೆಯಿಂದ ನಮ್ಮ ಕಾರ್ಯಕರ್ತನ ಆತ್ಮಹತ್ಯೆ ಆಗಿದೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್ ಕಾಂಗ್ರೆಸ್ ಆಫೀಸ್ ತರ ಕೆಲಸ ಮಾಡ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ. ಬೆಂಗಳೂರಿನ ಎಫ್ಐಆರ್ನಲ್ಲಿ ಶಾಸಕರ ಹೆಸರು ಬಿಟ್ಟಿದ್ದಾರೆ. ಇದನ್ನ ಗೃಹ ಸಚಿವರು ಗಮನಿಸಬೇಕು. ಮುಂದೆ ಏನಾದರೂ ಹೆಚ್ಚು ಕಡಿಮೆ ಆದರೆ ನಾವು ಜವಾಬ್ದಾರರಲ್ಲ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಹಿಂದೆ ಆತ್ಮಹತ್ಯೆ ಪ್ರಕರಣಗಳು ಏನಾಗಿದೆ ಅನ್ನೋದು ರಾಜ್ಯದ ಜನರ ಗಮನದಲ್ಲಿದೆ.
ಕಾಂಗ್ರೆಸ್ ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಸುತ್ತಿದೆ. ಇದನ್ನು ನೋಡಿ ಕಣ್ಣುಮುಚ್ಚಿ ಕೂರುವ ಪ್ರಶ್ನೆಯೇ ಇಲ್ಲ. ಎಫ್ಐಆರ್ನಲ್ಲಿ ಶಾಸಕರ ಹೆಸರು ಉಲ್ಲೇಖವಾಗುವವರೆಗೆ ಅಂತ್ಯಸಂಸ್ಕಾರ ಮಾಡಲ್ಲ. ಅರ್ಧ ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಪೊಲೀಸರಿಗೆ ಒಂದು ಗಂಟೆಗಳ ಗಡುವು ನೀಡಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…