ಕೊಡಗು

ರಾಜ್ಯದಲ್ಲಿ ಕಾಂಗ್ರೆಸ್‌ ತುಘಲಕ್‌ ಸರ್ಕಾರ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ ಅಂತಿಮ ದರ್ಶನ ಪಡೆದರು.

ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಸ್ಥಳೀಯ ಶಾಸಕರ ವೈಫಲ್ಯ ಎತ್ತಿ ಹಿಡಿದಿದ್ದೇ ತಪ್ಪಾ..?.ಆ ಕಾರಣಕ್ಕೆ ಕೇಸು ಹಾಕಿಸಿ ಹಿಂಸೆ ನೀಡಲಾಗಿದೆ. ಹೈಕೋರ್ಟ್‌ನಲ್ಲಿ ಬೇಲ್ ಆದ್ರೂ ಮನೆಗೆ ಪೊಲೀಸರನ್ನು ಯಾಕೆ ಕಳುಹಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಉಲ್ಲೇಖಿಸದಿರುವುದು ಅಕ್ಷಮ್ಯ ಅಪರಾಧ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರು, ಮಂತರ್ ಗೌಡ ಪ್ರಭಾವಿ ಶಾಸಕರಿದ್ದಾರೆ.

ಇಬ್ಬರು ಶಾಸಕರ ದಬ್ಬಾಳಿಕೆಯಿಂದ ನಮ್ಮ ಕಾರ್ಯಕರ್ತನ ಆತ್ಮಹತ್ಯೆ ಆಗಿದೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್ ಕಾಂಗ್ರೆಸ್ ಆಫೀಸ್ ತರ ಕೆಲಸ ಮಾಡ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ. ಬೆಂಗಳೂರಿನ ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಬಿಟ್ಟಿದ್ದಾರೆ. ಇದನ್ನ ಗೃಹ ಸಚಿವರು ಗಮನಿಸಬೇಕು. ಮುಂದೆ ಏನಾದರೂ ಹೆಚ್ಚು ಕಡಿಮೆ‌ ಆದರೆ ನಾವು ಜವಾಬ್ದಾರರಲ್ಲ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಹಿಂದೆ ಆತ್ಮಹತ್ಯೆ ಪ್ರಕರಣಗಳು‌ ಏನಾಗಿದೆ ಅನ್ನೋದು ರಾಜ್ಯದ ಜನರ ಗಮನದಲ್ಲಿದೆ.

ಕಾಂಗ್ರೆಸ್ ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಸುತ್ತಿದೆ. ಇದನ್ನು ನೋಡಿ ಕಣ್ಣುಮುಚ್ಚಿ ಕೂರುವ ಪ್ರಶ್ನೆಯೇ ಇಲ್ಲ. ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಉಲ್ಲೇಖವಾಗುವವರೆಗೆ ಅಂತ್ಯಸಂಸ್ಕಾರ ಮಾಡಲ್ಲ. ಅರ್ಧ ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಪೊಲೀಸರಿಗೆ ಒಂದು ಗಂಟೆಗಳ‌ ಗಡುವು ನೀಡಿದರು.

 

ಆಂದೋಲನ ಡೆಸ್ಕ್

Recent Posts

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 mins ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

18 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

7 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

21 hours ago