ಕೊಡಗು

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆ ಹಣ ಕಳುಹಿಸಿದ್ದಾರೆ. ಇನ್ಮುಂದೆ ಅಸ್ಸಾಂ ಚುನಾವಣೆಗೆ ಕಳುಹಿಸಲಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ. ಆರ್ ಅಶೋಕ್ ಅವರಿಗೆ ಆಗಲಿ, ವಿಜಯೇಂದ್ರ ಅವರಿಗೆ ಮೆಚ್ಯುರಿಟಿ ಇಲ್ಲ. ರಾಜಕಾರಣಿಗಳು ಏನಾದರೂ ಮಾತನಾಡಿದರು ಎಂದರೆ ಅದಕ್ಕೆ ಒಂದು ಘನತೆ ಇರಬೇಕು ಎಂದು ಆರ್.‌ಅಶೋಕ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರಿಗೆ ತಮ್ಮ ಪಕ್ಷದಲ್ಲಿ ಏನು ಆಗುತ್ತದೆ ಎನ್ನುವುದು ಗೊತ್ತಿಲ್ಲ ಅವರ ಪಕ್ಷ ದಲ್ಲಿರುವ ಹುಳುಕುಗಳನ್ನು ಸರಿಮಾಡಿಕೊಳ್ಳಲು ಆಗಲ್ಲ. ಶ್ರೀರಾಮುಲು, ರೆಡ್ಡಿ ಪಾದಯಾತ್ರೆ ಮಾಡುತ್ತೇವೆ ಅಂತಾರೆ. ಆದರೆ ಇವರು ಅದಕ್ಕೆ ಹೈಕಮಾಂಡ್ ಒಪ್ಪಿಗೆ ಬೇಕು ಅಂತಾರೆ. ಹೀಗಿರುವಾಗ ನಮ್ಮ ಪಕ್ಷದ ಬಗ್ಗೆ ಏನು ಮಾತನಾಡುವುದು. ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಅನುದಾನದ ಬಗ್ಗೆ ಒಬ್ಬ ಕೇಂದ್ರ ಸಚಿವನೂ ಮಾತನಾಡಲ್ಲ. ಜೋಳ, ಕಬ್ಬು ಅವುಗಳ ಎಂಎಸ್ ಪಿ ಬಗ್ಗೆ ಮಾತನಾಡಲ್ಲ. ಅದು ಬಿಟ್ಟು ಬೆಳಿಗ್ಗೆಯಿಂದ ಸಂಜೆವರೆಗೆ ನಮ್ಮ ಸರ್ಕಾರದ ವಿರುದ್ಧ ಬೊಗಳುತ್ತಾರೆ. ಅವರಿಗೆ ತಾಕತ್ತಿದ್ದರೆ ಕೇಂದ್ರದಿಂದ ಬರಬೇಕಾಗಿರುವ ಅನುದಾನ ಕೊಡಿಸಲಿ ಎಂದು ಸವಾಲು ಹಾಕಿದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

7 hours ago