ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆ ಹಣ ಕಳುಹಿಸಿದ್ದಾರೆ. ಇನ್ಮುಂದೆ ಅಸ್ಸಾಂ ಚುನಾವಣೆಗೆ ಕಳುಹಿಸಲಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ. ಆರ್ ಅಶೋಕ್ ಅವರಿಗೆ ಆಗಲಿ, ವಿಜಯೇಂದ್ರ ಅವರಿಗೆ ಮೆಚ್ಯುರಿಟಿ ಇಲ್ಲ. ರಾಜಕಾರಣಿಗಳು ಏನಾದರೂ ಮಾತನಾಡಿದರು ಎಂದರೆ ಅದಕ್ಕೆ ಒಂದು ಘನತೆ ಇರಬೇಕು ಎಂದು ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರಿಗೆ ತಮ್ಮ ಪಕ್ಷದಲ್ಲಿ ಏನು ಆಗುತ್ತದೆ ಎನ್ನುವುದು ಗೊತ್ತಿಲ್ಲ ಅವರ ಪಕ್ಷ ದಲ್ಲಿರುವ ಹುಳುಕುಗಳನ್ನು ಸರಿಮಾಡಿಕೊಳ್ಳಲು ಆಗಲ್ಲ. ಶ್ರೀರಾಮುಲು, ರೆಡ್ಡಿ ಪಾದಯಾತ್ರೆ ಮಾಡುತ್ತೇವೆ ಅಂತಾರೆ. ಆದರೆ ಇವರು ಅದಕ್ಕೆ ಹೈಕಮಾಂಡ್ ಒಪ್ಪಿಗೆ ಬೇಕು ಅಂತಾರೆ. ಹೀಗಿರುವಾಗ ನಮ್ಮ ಪಕ್ಷದ ಬಗ್ಗೆ ಏನು ಮಾತನಾಡುವುದು. ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಅನುದಾನದ ಬಗ್ಗೆ ಒಬ್ಬ ಕೇಂದ್ರ ಸಚಿವನೂ ಮಾತನಾಡಲ್ಲ. ಜೋಳ, ಕಬ್ಬು ಅವುಗಳ ಎಂಎಸ್ ಪಿ ಬಗ್ಗೆ ಮಾತನಾಡಲ್ಲ. ಅದು ಬಿಟ್ಟು ಬೆಳಿಗ್ಗೆಯಿಂದ ಸಂಜೆವರೆಗೆ ನಮ್ಮ ಸರ್ಕಾರದ ವಿರುದ್ಧ ಬೊಗಳುತ್ತಾರೆ. ಅವರಿಗೆ ತಾಕತ್ತಿದ್ದರೆ ಕೇಂದ್ರದಿಂದ ಬರಬೇಕಾಗಿರುವ ಅನುದಾನ ಕೊಡಿಸಲಿ ಎಂದು ಸವಾಲು ಹಾಕಿದರು.
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…