ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ ಸಾಂಪ್ರದಾಯಿಕ ಕಾಪಳಕಳಿ, ಕೊಂಬು, ಕೊಟ್ಟು ವಾಲಗ, ದುಡಿ ಕೊಟ್ಟ್ ಪಾಟ್ನೊಂದಿಗೆ ಬಿದ್ದಾಟಂಡ ವಾಡೆಗೆ ಮೆರವಣಿಗೆಯ ಮೂಲಕ ಆಗಮಿಸಿದರು. ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವರ ಕೋಲನ್ನು ಬರಮಾಡಿಕೊಳ್ಳಲಾಯಿತು.
ಇದನ್ನು ಓದಿ: ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್ ಸಲಹೆ
ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಾಲ್ಕು ಗ್ರಾಮಗಳವರು ದುಡಿಕೊಟ್ಟ್ ಪಾಟ ನೊಂದಿಗೆ ಬಿದ್ದಾಟಂಡ ವಾಡೆಗೆ ಆಗಮಿಸಿದರು. ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿ ಕೊಳ್ಳಲಾಯಿತು. ಬಳಿಕ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ದೊರೆಯಿತು.ಬಿದ್ದಾಟಂಡ ವಾಡೆಯ ಮಂದ್ನಲ್ಲಿ ಮೂರು ಗ್ರಾಮಸ್ಥರುಗಳೂ ಸೇರಿ ಕೋಲಾಟವನ್ನು ದೇವರ ಉದ್ಘೋಷದೊಂದಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಬಿದ್ದಾಟಂಡ ಕುಟುಂಬದ ರಮೇಶ್ ಚಂಗಪ್ಪ, ಬೇತು ಗ್ರಾಮದ ಕೊಂಡಿರ ಕುಟುಂಬದ ಗಣೇಶ್ ಅವರು ನಾಡ್ ಮಂದ್ನಲ್ಲಿ ನಡೆಯುವ ಕೋಲಾಟದ ಇತಿಹಾಸದ ಕುರಿತು ಮಾಹಿತಿ ನೀಡಿದರು.
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…