ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ ಸಾಂಪ್ರದಾಯಿಕ ಕಾಪಳಕಳಿ, ಕೊಂಬು, ಕೊಟ್ಟು ವಾಲಗ, ದುಡಿ ಕೊಟ್ಟ್ ಪಾಟ್ನೊಂದಿಗೆ ಬಿದ್ದಾಟಂಡ ವಾಡೆಗೆ ಮೆರವಣಿಗೆಯ ಮೂಲಕ ಆಗಮಿಸಿದರು. ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವುದರ ಮೂಲಕ ದೇವರ ಕೋಲನ್ನು ಬರಮಾಡಿಕೊಳ್ಳಲಾಯಿತು.
ಇದನ್ನು ಓದಿ: ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್ ಸಲಹೆ
ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಾಲ್ಕು ಗ್ರಾಮಗಳವರು ದುಡಿಕೊಟ್ಟ್ ಪಾಟ ನೊಂದಿಗೆ ಬಿದ್ದಾಟಂಡ ವಾಡೆಗೆ ಆಗಮಿಸಿದರು. ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿ ಕೊಳ್ಳಲಾಯಿತು. ಬಳಿಕ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕ ಪುತ್ತರಿ ಕೋಲಾಟಕ್ಕೆ ಚಾಲನೆ ದೊರೆಯಿತು.ಬಿದ್ದಾಟಂಡ ವಾಡೆಯ ಮಂದ್ನಲ್ಲಿ ಮೂರು ಗ್ರಾಮಸ್ಥರುಗಳೂ ಸೇರಿ ಕೋಲಾಟವನ್ನು ದೇವರ ಉದ್ಘೋಷದೊಂದಿಗೆ ನಡೆಸಿದರು.
ಕಾರ್ಯಕ್ರಮದಲ್ಲಿ ಬಿದ್ದಾಟಂಡ ಕುಟುಂಬದ ರಮೇಶ್ ಚಂಗಪ್ಪ, ಬೇತು ಗ್ರಾಮದ ಕೊಂಡಿರ ಕುಟುಂಬದ ಗಣೇಶ್ ಅವರು ನಾಡ್ ಮಂದ್ನಲ್ಲಿ ನಡೆಯುವ ಕೋಲಾಟದ ಇತಿಹಾಸದ ಕುರಿತು ಮಾಹಿತಿ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…