dussehra inauguration
ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಇನ್ನೂ ಪೂರ್ಣವಾಗಿ ಮುಟ್ಟಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವುದರಿಂದ, ಮುಂದಿನ ಸಂದರ್ಭದಲ್ಲಿ ದಲಿತ ನಾಯಕರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕು” ಎಂದು ಹೇಳಿದರು.
ಹೈಕಮಾಂಡ್ ಸೂಕ್ತ ದಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಅವರನ್ನು ಸಿಎಂ ಸ್ಥಾನಕ್ಕೆ ತರುವಂತೆ ಅವರು ಮನವಿ ಮಾಡಿದರು. ದಲಿತ ನಾಯಕರ ಆಯ್ಕೆಯಲ್ಲಿ ಯಾವುದೇ ಗೊಂದಲಗಳಿರಬಾರದು ಎಂದು ಒತ್ತಿ ಹೇಳಿದ ಅವರು, ರಾಜ್ಯದಲ್ಲಿ ದಲಿತರು ಗಣನೀಯ ಸಂಖ್ಯೆಯಲ್ಲಿದ್ದು, ಸದಾ ಕಾಂಗ್ರೆಸ್ಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.
“ಕಾಂಗ್ರೆಸ್ನ ಬೆನ್ನೆಲುಬು ಕಳೆದುಕೊಂಡರೆ ಪಕ್ಷ ಬಲವಾಗಿ ಇರಲು ಸಾಧ್ಯವಿಲ್ಲ. ಹೀಗಾಗಿ ಬೆನ್ನೆಲುಬನ್ನು ಬಲಪಡಿಸಬೇಕಾದರೆ ದಲಿತ ನಾಯಕರು ಸಿಎಂ ಆಗಬೇಕು ಎಂಬ ತೀರ್ಮಾನ ತೆಗೆದುಕೊಳ್ಳಬೇಕು. ಹೈಕಮಾಂಡ್ ಕೂಡ ಇದನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ನಂಬಿದ್ದೇನೆ” ಎಂದು ಮಹದೇವಪ್ಪ ವಿವರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತಮ್ಮ ಶ್ರಮಕ್ಕೆ ಸರಿಯಾದ ಸ್ಥಾನಮಾನ ನೀಡುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, “ಪ್ರತಿಯೊಬ್ಬರಲ್ಲೂ ಆಕಾಂಕ್ಷೆಗಳಿರುತ್ತವೆ. ಅದು ತಪ್ಪಲ್ಲ. ಆದರೆ ಎಲ್ಲವನ್ನೂ ಹೈಕಮಾಂಡ್ ಪರಿಗಣಿಸಿ ನಿರ್ಧರಿಸುತ್ತದೆ” ಎಂದು ಹೇಳಿದರು.
ಈ ಹೇಳಿಕೆಯು ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ದಲಿತ ನಾಯಕತ್ವದ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…