ಕೊಡಗು

ಕುಶಾಲನಗರ ಮಸೀದಿಯಲ್ಲಿ‌ ಕಳ್ಳತನ: ಆರೋಪಿ ಬಂಧನ

ಕುಶಾಲನಗರ: ಮಸೀದಿಯಲ್ಲಿ‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ ಕಾಣಿಕೆ ಹುಂಡಿಯನ್ನು ಮತ್ತು ಮಸೀದಿಯ ಧ್ವನಿ ವರ್ಧಕಕ್ಕೆ ಅಳವಡಿಸುವ ಆಂಪ್ಲಿಫೈರ್ ಹಾಗೂ ಅದರ ಉಪಕರಣವನ್ನು ಡಿ.19ರಂದು ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದರು.

ಪ್ರಕರಣದ ಆರೋಪಿಗಳ ಪತ್ತೆಯ ಸಲುವಾಗಿ ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಪಿಐ ಪ್ರಕಾಶ್.ಬಿ.ಜಿ, ಕುಶಾಲನಗರ ನಗರ ಠಾಣೆಯ ಪಿಎಸ್‌ಐ ಗೀತಾ, ಅಪರಾಧ ಪತ್ತೆ ಸಿಬ್ಬಂದಿಗಳು, ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಇಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತನಿಂದ ಕಳ್ಳತನವಾಗಿದ್ದ ಧ್ವನಿ ವರ್ಧಕಕ್ಕೆ ಅಳವಡಿಸುವ ಒಂದು ಆಂಪ್ಲಿಫೈರ್ ಮತ್ತು ಅದರ ಸಲಕರಣೆಗಳು ಹಾಗೂ ರೂ. 3000 ನಗದನ್ನು ವಶಪಡಿಕೊಳ್ಳಲಾಗಿದೆ.
ಆರೋಪಿಯು ಮಡಿಕೇರಿ ಹಾಗೂ ಪಿರಿಯಾಪಟ್ಟಣದ ಮಸೀದಿಗಳಲ್ಲಿ ಕಳ್ಳತನ ನಡೆಸಿರುವುದು ಕೂಡ ತನಿಖೆಯಲ್ಲಿ ತಿಳಿದುಬಂದಿದೆ. ಇದೆಲ್ಲರ ಜೊತೆಗೆ ಪಿರಿಯಾಪಟ್ಟಣ ಠಾಣೆ ವ್ಯಾಪ್ತಿಯ ಮಸೀದಿಯೊಂದರಲ್ಲಿ ಕಳ್ಳತನ ಮಾಡಿದ್ದ 2 ಆಂಪ್ಲಿಫೈರ್‌ಗಳು, ಡಿಜಿಟಲ್ ಎಕೋ ರಿವರ್ ಮಿಕ್ಸರ್ & ಮಾನಿಟರ್ ಹಾಗೂ ಮಡಿಕೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿಯೊಂದರಿಂದ ಕಳ್ಳತನ ಮಾಡಿದ ಒಂದು ಆಂಪ್ಲಿಫೈರ್, ಸೌಂಡ್ ಮಿಕ್ಸರ್ ಉಪಕರಣಗಳನ್ನು ಮತ್ತು ಆರೋಪಿಯು ಕೃತ್ಯಕ್ಕೆ ಬಳಸಿದ್ದ 2 ಮೊಬೈಲ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

9 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

10 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

11 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

12 hours ago